ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡುತ್ತಿದ್ದಾಗಲೇ ಪೊಲೀಸರು ಅಲ್ಲಿಗೆ ಬಂದು ಗುಹಾ ಅವರ ತೋಳನ್ನು ಹಿಡಿದು ಎಳೆದುಕೊಂಡು ಹೋದರು. ಈ ವೇಳೆ ಹೋರಾಟಗಾರರಾದ ಜಿ.ಎನ್.ನಾಗರಾಜ್, ವಿ.ಎಸ್.ವಿಮಲಾ, ಜ್ಯೋತಿ ಅನಂತ ಸುಬ್ಬರಾವ್, ಎಸ್.ವರಲಕ್ಷ್ಮೀ ಅವರನ್ನು ವಶಕ್ಕೆ ಪಡೆಯಲಾಯಿತು. ನಂತರ ಎಲ್ಲರನ್ನೂ ಪೊಲೀಸರು ಬಿಡುಗಡೆ ಮಾಡಿದರು.