<p><strong>ಉಡುಪಿ</strong>: ರಾಜ್ಯದಲ್ಲಿ ಸದ್ಯ ಆಡಳಿತ ನಡೆಸುತ್ತಿರುವ ಮೈತ್ರಿ ಸರ್ಕಾರವು ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ನೀಡುವ ಅನುದಾನವನ್ನು ಕಡಿತಗೊಳಿಸುವ ಮೂಲಕ ಸಂಸ್ಕೃತಿ ವಿರೋಧಿ ನೀತಿಯನ್ನು ಅನುಸರಿಸುತ್ತಿದೆ ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷ ಪ್ರೊ.ಎಂ.ಎ. ಹೆಗಡೆ ಅಸಮಾಧಾನ ವ್ಯಕ್ತಪಡಿಸಿದರು.</p>.<p>ಶ್ರೀಕೃಷ್ಣ ಸುವರ್ಣಗೋಪುರ ಸಮರ್ಪಣೋತ್ಸವದ ಅಂಗವಾಗಿ ಉಡುಪಿ ಶ್ರೀ ಕೃಷ್ಣಮಠ ರಾಜಾಂಗಣದಲ್ಲಿ ಶನಿವಾರ ನಡೆದ ಕಲಾವಿದರ ಸಮಾವೇಶದಲ್ಲಿ ಅವರು ಮಾತನಾಡಿದರು.</p>.<p>ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಮೂಲಕ ಕಲೆ ಹಾಗೂ ಸಂಸ್ಕೃತಿಗಳಿಗೆ ಪ್ರೋತ್ಸಾಹ ನೀಡಬೇಕೆಂಬ ಧೋರಣೆ ಇದೆ. ಆದರೆ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಇಲಾಖೆಗೆ ಕೊಡುವ ಅನುದಾನವನ್ನು ಕಡಿತಗೊಳಿಸಲಾಗುತ್ತಿದೆ. ಕಳೆದ ವರ್ಷ ಇಲಾಖೆಗೆ ₹397 ಕೋಟಿ ಅನುದಾನ ನೀಡಬೇಕಿತ್ತು. ಆದರೆ ರೈತರ ಸಾಲಮನ್ನಾದ ನೆಪದಲ್ಲಿ ₹100 ಕೋಟಿ ಕಡಿತಗೊಳಿಸಲಾಗಿತ್ತು. ಈ ವರ್ಷವೂ ₹13 ಕೋಟಿಯಷ್ಟು ಕಡಿಮೆ ಮಾಡಿದ್ದಾರೆ. ಹೀಗೆ ವರ್ಷದಿಂದ ವರ್ಷಕ್ಕೆ ಇಲಾಖೆಗೆ ಕೊಡಬೇಕಾಗಿರುವ ಅನುದಾನಕ್ಕೆ ಸರ್ಕಾರ ಕತ್ತರಿ ಹಾಕುತ್ತಿದೆ ಎಂದು ದೂರಿದರು.</p>.<p>ಸರ್ಕಾರವು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅನುದಾನಕ್ಕೆ ಕತ್ತರಿ ಹಾಕಿದರೆ, ಇಲಾಖೆಯು ಅದನ್ನು ಯಕ್ಷಗಾನ ಅಕಾಡೆಮಿ ಮೇಲೆ ಹೊರೆಹಾಕಿದೆ. ಹಾಗಾಗಿ ಪ್ರತಿ ವರ್ಷ ಅಕಾಡೆಮಿಗೆ ಬರುತ್ತಿದ್ದ ₹1.10 ಕೋಟಿಯಷ್ಟು ಹಣ ಕಡಿತಗೊಂಡಿದೆ. ಈಗ ₹80 ಲಕ್ಷ ಮಾತ್ರ ಬರುತ್ತಿದೆ. ಇದರಲ್ಲಿ ಆಡಳಿತಾತ್ಮಕ ವೆಚ್ಚವನ್ನು ಕಳೆದರೆ, ₹38ಲಕ್ಷ ಉಳಿಯುತ್ತದೆ. ಇದರಲ್ಲಿ ರಾಜ್ಯದಾದ್ಯಂತ ಯಕ್ಷಗಾನ ಕಲೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ಹಾಕಿಕೊಳ್ಳಬೇಕಾದ ಅನಿವಾರ್ಯತೆ ಅಕಾಡೆಮಿಗೆ ಎದುರಾಗಿದೆ ಎಂದು ಪ್ರೊ.ಹೆಗಡೆ ಬೇಸರ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ</strong>: ರಾಜ್ಯದಲ್ಲಿ ಸದ್ಯ ಆಡಳಿತ ನಡೆಸುತ್ತಿರುವ ಮೈತ್ರಿ ಸರ್ಕಾರವು ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ನೀಡುವ ಅನುದಾನವನ್ನು ಕಡಿತಗೊಳಿಸುವ ಮೂಲಕ ಸಂಸ್ಕೃತಿ ವಿರೋಧಿ ನೀತಿಯನ್ನು ಅನುಸರಿಸುತ್ತಿದೆ ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷ ಪ್ರೊ.ಎಂ.ಎ. ಹೆಗಡೆ ಅಸಮಾಧಾನ ವ್ಯಕ್ತಪಡಿಸಿದರು.</p>.<p>ಶ್ರೀಕೃಷ್ಣ ಸುವರ್ಣಗೋಪುರ ಸಮರ್ಪಣೋತ್ಸವದ ಅಂಗವಾಗಿ ಉಡುಪಿ ಶ್ರೀ ಕೃಷ್ಣಮಠ ರಾಜಾಂಗಣದಲ್ಲಿ ಶನಿವಾರ ನಡೆದ ಕಲಾವಿದರ ಸಮಾವೇಶದಲ್ಲಿ ಅವರು ಮಾತನಾಡಿದರು.</p>.<p>ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಮೂಲಕ ಕಲೆ ಹಾಗೂ ಸಂಸ್ಕೃತಿಗಳಿಗೆ ಪ್ರೋತ್ಸಾಹ ನೀಡಬೇಕೆಂಬ ಧೋರಣೆ ಇದೆ. ಆದರೆ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಇಲಾಖೆಗೆ ಕೊಡುವ ಅನುದಾನವನ್ನು ಕಡಿತಗೊಳಿಸಲಾಗುತ್ತಿದೆ. ಕಳೆದ ವರ್ಷ ಇಲಾಖೆಗೆ ₹397 ಕೋಟಿ ಅನುದಾನ ನೀಡಬೇಕಿತ್ತು. ಆದರೆ ರೈತರ ಸಾಲಮನ್ನಾದ ನೆಪದಲ್ಲಿ ₹100 ಕೋಟಿ ಕಡಿತಗೊಳಿಸಲಾಗಿತ್ತು. ಈ ವರ್ಷವೂ ₹13 ಕೋಟಿಯಷ್ಟು ಕಡಿಮೆ ಮಾಡಿದ್ದಾರೆ. ಹೀಗೆ ವರ್ಷದಿಂದ ವರ್ಷಕ್ಕೆ ಇಲಾಖೆಗೆ ಕೊಡಬೇಕಾಗಿರುವ ಅನುದಾನಕ್ಕೆ ಸರ್ಕಾರ ಕತ್ತರಿ ಹಾಕುತ್ತಿದೆ ಎಂದು ದೂರಿದರು.</p>.<p>ಸರ್ಕಾರವು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅನುದಾನಕ್ಕೆ ಕತ್ತರಿ ಹಾಕಿದರೆ, ಇಲಾಖೆಯು ಅದನ್ನು ಯಕ್ಷಗಾನ ಅಕಾಡೆಮಿ ಮೇಲೆ ಹೊರೆಹಾಕಿದೆ. ಹಾಗಾಗಿ ಪ್ರತಿ ವರ್ಷ ಅಕಾಡೆಮಿಗೆ ಬರುತ್ತಿದ್ದ ₹1.10 ಕೋಟಿಯಷ್ಟು ಹಣ ಕಡಿತಗೊಂಡಿದೆ. ಈಗ ₹80 ಲಕ್ಷ ಮಾತ್ರ ಬರುತ್ತಿದೆ. ಇದರಲ್ಲಿ ಆಡಳಿತಾತ್ಮಕ ವೆಚ್ಚವನ್ನು ಕಳೆದರೆ, ₹38ಲಕ್ಷ ಉಳಿಯುತ್ತದೆ. ಇದರಲ್ಲಿ ರಾಜ್ಯದಾದ್ಯಂತ ಯಕ್ಷಗಾನ ಕಲೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ಹಾಕಿಕೊಳ್ಳಬೇಕಾದ ಅನಿವಾರ್ಯತೆ ಅಕಾಡೆಮಿಗೆ ಎದುರಾಗಿದೆ ಎಂದು ಪ್ರೊ.ಹೆಗಡೆ ಬೇಸರ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>