ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ‘5000 ಮಂದಿಗೆ ಹೋಮ್ ಕ್ವಾರಂಟೈನ್ಗೆ ಸೂಚಿಸಿ, ಅವರ ಕೈಗಳ ಮೇಲೆ ಮುದ್ರೆ ಹಾಕಲಾಗಿದೆ. ಸಾರ್ವಜನಿಕರ ಹಿತದ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ. ಆದರೆ, ಹೋಮ್ ಕ್ವಾರಂಟೈನ್ಗೆ ಸೂಚಿಸಲಾಗಿರುವ ವ್ಯಕ್ತಿಗಳು ಬಿಎಂಟಿಸಿ ಬಸ್ಗಳಲ್ಲಿ ಓಡಾಡುತ್ತಿರುವುದು ಮತ್ತು ರೆಸ್ಟೋರೆಂಟ್ಗಳಲ್ಲಿ ಕುಳಿತಿರುವ ಬಗ್ಗೆ ನಮಗೆ ಕರೆಗಳು ಬಂದಿವೆ. ಇಂಥವರು ಕಂಡರೆ ಸಹಾಯವಾಣಿ 100 ಕರೆ ಮಾಡಿ,’ ಎಂದು ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
ಮಾಹಿತಿ ನೀಡಿದರೆ, ಅಂಥವರನ್ನು ಬಂಧಿಸಿ ಸರ್ಕಾರಿ ಕ್ವಾರಂಟೀನ್ಗಳಲ್ಲಿ ಇರಿಸುವುದಾಗಿಯೂ ಭಾಸ್ಕರ್ ರಾವ್ ಅವರು ಎಚ್ಚರಿಸಿದ್ದಾರೆ.