ಎಪಿಎಂಸಿ ಕಾಯ್ದೆ ತಿದ್ದುಪಡಿ ಕುರಿತು ಎಫ್ಕೆಸಿಸಿಐ ಸೋಮವಾರ ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಮಾರುಕಟ್ಟೆ ಶುಲ್ಕವನ್ನು ಕಡಿಮೆ ಮಾಡುವ ಬಗ್ಗೆ ಸರ್ಕಾರದ ಹಂತದಲ್ಲಿ ಚರ್ಚೆ ನಡೆಯುತ್ತಿದೆ. ಎಪಿಎಂಸಿ ವರ್ತಕರ ಸಮಸ್ಯೆಗಳು ಮುಖ್ಯಮಂತ್ರಿ ಅವರಿಗೆ ಅರ್ಥವಾಗಿವೆ. ಎಲ್ಲಾ ಗೊಂದಲಗಳಿಗೆಒಂದು ವಾರದಲ್ಲಿ ತೆರೆ ಬೀಳಲಿದೆ’ ಎಂದು ಭರವಸೆ ನೀಡಿದರು.