ಗುರುವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸರ್ಕಾರದ ಈ ನಡೆ ಕೊರೊನಾ ಸೋಂಕಿಗಿಂತಲೂ ದೊಡ್ಡ ಆಘಾತವನ್ನು ರೈತ ಸಮುದಾಯಕ್ಕೆ ನೀಡಿದೆ. ನಿರ್ದಿಷ್ಟಪಡಿಸಿದ ಕೃಷಿ ಉತ್ಪನ್ನವನ್ನು ಯಾರು ಎಲ್ಲಿ ಬೇಕಾದರೂ ಖರೀದಿಸುವ ಹಾಗೂ ಮಾರಾಟ ಮಾಡುವ ಅವಕಾಶ ನೀಡಿದಂತಾಗುತ್ತದೆ. ದೊಡ್ಡ ಕಂಪನಿಗಳು ನಿಗದಿಪಡಿಸಿದ ದರಕ್ಕೆ ಕೃಷಿ ಉತ್ಪನ್ನಗಳನ್ನು ರೈತರು ಮಾರಾಟ ಮಾಡಬೇಕಾಗುತ್ತದೆ. ಈಗಿನ ವ್ಯವಸ್ಥೆಯ ಹಾಗೇ ರೈತರಿಗೆ ಸ್ಪರ್ಧಾತ್ಮಕ ದರ ದೊರೆಯುವುದಿಲ್ಲ’ ಎಂದರು.