‘ರಾಮನಗರ ಉಪ ಚುನಾವಣೆಯಲ್ಲಿ ನನ್ನ ಮಗ ದುರಂತ ನಾಯಕನ ಪಾತ್ರ ವಹಿಸಿದ್ದಾನೆ. ಇದರಿಂದಾಗಿ ನಮ್ಮ ಕುಟುಂಬದವರು ತಲೆ ಎತ್ತಿ ಓಡಾಡದಂತಹ ಪರಿಸ್ಥಿತಿ ಇದೆ. ಕ್ಷೇತ್ರದಲ್ಲಿ ನಾನು ಕಟ್ಟಿದ್ದ ಸ್ವಾಭಿಮಾನಿ ರಾಜಕೀಯದ ಕೋಟೆ ಇಂದು ಉರುಳಿಬಿದ್ದಿದೆ. ನಮ್ಮ ಮನೆಯಲ್ಲಿ ಈವರೆಗೂ ಸೂತಕದ ಛಾಯೆ ಇದೆ. ಚಂದ್ರಶೇಖರ್ ನಡೆಯಿಂದ ಜಿಲ್ಲೆಯ ಸಾವಿರಾರು ಮತದಾರರಿಗೆ, ಬಿಜೆಪಿ ಕಾರ್ಯಕರ್ತರಿಗೂ ನೋವಾಗಿದೆ, ನಾನು ಅವರೆಲ್ಲರ ಕ್ಷಮೆ ಕೋರುತ್ತೇನೆ’ ಎಂದು ಕೈ ಮುಗಿದರು. ಇದರ ನೈತಿಕ ಹೊಣೆ ಹೊತ್ತು ಮುಂದೆ ರಾಜಕೀಯ ಚಟುವಟಿಕೆಗಳಿಂದ ದೂರ ಉಳಿಯುವುದಾಗಿಯೂ ಹೇಳಿದರು.