‘ನಮ್ಮ ಶಾಲೆಗಳಲ್ಲಿ ಕಲಿಸಲಾಗುತ್ತಿರುವ ಇತಿಹಾಸ ಪೂರ್ಣವಲ್ಲ, ಪೂರ್ಣ ಸತ್ಯವಲ್ಲ ಎಂಬ ಮಾತನ್ನು ನಾವು ಕೇಳುತ್ತಲೇ ಇದ್ದೇವೆ. ಇದೇ ಇತಿಹಾಸವೆಂದು ಅಂತಿಮ ಗೆರೆ ಎಳೆದು ಬಿಡುವುದು ಸಾಧ್ಯವಿಲ್ಲ. ಟಿಪ್ಪು ಚರಿತ್ರೆ ಅರಿಯದೇ ಆತನನ್ನು ವೈಭವೀಕರಿಸಿ ಬರೆದಿರುವುದನ್ನು ಮೊದಲು ಕೈಬಿಡಬೇಕು. ಟಿಪ್ಪು ತನ್ನ ಸಾಮ್ರಾಜ್ಯ ವಿಸ್ತರಣೆ, ಧರ್ಮ ಪ್ರಚಾರಕ್ಕೆ ಹೊರಟಿದ್ದನೇ ಹೊರತು ಎಂದೂ ಸ್ವಾತಂತ್ರ್ಯಕ್ಕಾಗಿ ಹೋರಾಟ ನಡೆಸಿಲ್ಲ’ ಎಂದು ಹೇಳಿದ್ದಾರೆ.