<p><strong>ಚಿಕ್ಕಮಗಳೂರು:</strong> ರಾಜ್ಯದಲ್ಲಿ 2500 ವೈದ್ಯರ ಹುದ್ದೆಗಳು ಖಾಲಿ ಇದ್ದು, ಕೋವಿಡ್–19 ತಣ್ಣಗಾದ ನಂತರ ನೇಮಕಾತಿ ಪ್ರಕ್ರಿಯೆ ಕೈಗೆತ್ತಿಕೊಳ್ಳಲಾಗುವುದು ಎಂದು ಆರೋಗ್ಯ ಸಚಿವ ಶ್ರೀರಾಮುಲು ಇಲ್ಲಿ ಗುರುವಾರ ತಿಳಿಸಿದರು.</p>.<p>‘ವೈದ್ಯರ ಹುದ್ದೆಗಳ ಭರ್ತಿ ನಿಟ್ಟಿನಲ್ಲಿ ಈಗಾಗಲೇ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗಿದೆ. ಲಸಿಕೆ ಕಂಡುಹಿಡಿಯುವವರೆಗೆ ಕೋವಿಡ್ನೊಂದಿಗೆ ಪಯಣಿಸಲೇಬೇಕಾದ ಅನಿವಾರ್ಯ ಇದೆ’ ಎಂದು ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.</p>.<p>‘ಮುಂಬೈನಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದ ಮಂಡ್ಯ ಜಿಲ್ಲೆಯ ವ್ಯಕ್ತಿಯನ್ನು ಊರಿಗೆ ಅಂಬುಲೆನ್ಸ್ನಲ್ಲಿ ತರಲಾಗಿತ್ತು. ಅಂಬುಲೆನ್ಸ್ನಲ್ಲಿ ಪತ್ನಿ, ಇಬ್ಬರು ಮಹಿಳೆಯರು, ಪುತ್ರ, ಇಬ್ಬರು ಮೊಮ್ಮಕ್ಕಳು, ಸಂಬಂಧಿಯೊಬ್ಬರು ಬಂದಿದ್ದಾರೆ. ಈ ಪೈಕಿ ಮಕ್ಕಳು, ಮೊಮ್ಮಕ್ಕಳಿಗೆ ಕೊರೊನಾ ಪತ್ತೆಯಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯೂ ನಡೆಯುತ್ತಿದೆ’ ಎಂದು ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು:</strong> ರಾಜ್ಯದಲ್ಲಿ 2500 ವೈದ್ಯರ ಹುದ್ದೆಗಳು ಖಾಲಿ ಇದ್ದು, ಕೋವಿಡ್–19 ತಣ್ಣಗಾದ ನಂತರ ನೇಮಕಾತಿ ಪ್ರಕ್ರಿಯೆ ಕೈಗೆತ್ತಿಕೊಳ್ಳಲಾಗುವುದು ಎಂದು ಆರೋಗ್ಯ ಸಚಿವ ಶ್ರೀರಾಮುಲು ಇಲ್ಲಿ ಗುರುವಾರ ತಿಳಿಸಿದರು.</p>.<p>‘ವೈದ್ಯರ ಹುದ್ದೆಗಳ ಭರ್ತಿ ನಿಟ್ಟಿನಲ್ಲಿ ಈಗಾಗಲೇ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗಿದೆ. ಲಸಿಕೆ ಕಂಡುಹಿಡಿಯುವವರೆಗೆ ಕೋವಿಡ್ನೊಂದಿಗೆ ಪಯಣಿಸಲೇಬೇಕಾದ ಅನಿವಾರ್ಯ ಇದೆ’ ಎಂದು ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.</p>.<p>‘ಮುಂಬೈನಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದ ಮಂಡ್ಯ ಜಿಲ್ಲೆಯ ವ್ಯಕ್ತಿಯನ್ನು ಊರಿಗೆ ಅಂಬುಲೆನ್ಸ್ನಲ್ಲಿ ತರಲಾಗಿತ್ತು. ಅಂಬುಲೆನ್ಸ್ನಲ್ಲಿ ಪತ್ನಿ, ಇಬ್ಬರು ಮಹಿಳೆಯರು, ಪುತ್ರ, ಇಬ್ಬರು ಮೊಮ್ಮಕ್ಕಳು, ಸಂಬಂಧಿಯೊಬ್ಬರು ಬಂದಿದ್ದಾರೆ. ಈ ಪೈಕಿ ಮಕ್ಕಳು, ಮೊಮ್ಮಕ್ಕಳಿಗೆ ಕೊರೊನಾ ಪತ್ತೆಯಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯೂ ನಡೆಯುತ್ತಿದೆ’ ಎಂದು ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>