ಸಾಹಿತಿ ಬರಗೂರು ರಾಮಚಂದ್ರಪ್ಪ ಅಧ್ಯಕ್ಷತೆಯ ಆಯ್ಕೆ ಸಮಿತಿ ಬೆಳಗಾವಿಯ ಕಾಗಣಿಕಾರ ಅವರನ್ನು ಪ್ರಶಸ್ತಿ ಆಯ್ಕೆ ಮಾಡಿದೆ. ಪ್ರಶಸ್ತಿ ₹5 ಲಕ್ಷ ನಗದು ಒಳಗೊಂಡಿದೆ.ಕಾಗಣಿಕಾರ ಅವರು ‘ಜನ ಜಾಗರಣಾ ಸಂಸ್ಥೆ’ಯ ಮೂಲಕ ರಾತ್ರಿ ಶಾಲೆಗಳನ್ನು ಆರಂಭಿಸಿದರು. ಅರಣ್ಯ ಪ್ರದೇಶಗಳಲ್ಲಿ ಸುತ್ತಾಡಿ ಅಲ್ಲಿನ ಜನರಿಗೆ ಶೈಕ್ಷಣಿಕ ವಿಷಯಗಳ ಕುರಿತು ಜಾಗೃತಿ ಮೂಡಿಸಿದರು.