‘ಅಡಿಕೆಯಲ್ಲಿ ಆರೋಗ್ಯಕ್ಕೆ ಹಾನಿಕಾರಕ ಅಂಶಗಳಿವೆ ಎಂಬ ಸಂಗತಿಯನ್ನು ಮುಂದಿಟ್ಟು, 2011ರಲ್ಲಿ ಅಡಿಕೆ ನಿಷೇಧ ಜಾರಿಗೆ ಅಂದಿನ ಸರ್ಕಾರ ಯೋಚಿಸಿತ್ತು. ಸುಪ್ರೀಂ ಕೋರ್ಟ್ನಲ್ಲಿ ಈ ವಿಷಯ ವಿಚಾರಣೆ ಬಾಕಿಯಿದೆ. ಅಡಿಕೆ ಬೆಳೆಯುವ ಭಾಗದ ಸಂಸದರು ಒಟ್ಟಾಗಿ, ರಾಜ್ಯದ ವಿವಿಧ ಸಂಶೋಧನಾ ಕೇಂದ್ರಗಳು ಅಡಿಕೆ ಪೂರಕವಾಗಿ ನೀಡಿರುವ ವರದಿಯನ್ನು ಪರಿಣಾಮಕಾರಿಯಾಗಿ ಸುಪ್ರೀಂ ಕೋರ್ಟ್ಗೆ ಸಲ್ಲಿಸುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ತರಬೇಕು’ ಎಂದು ಇಲ್ಲಿನ ಅಡಿಕೆ, ಕಾಳುಮೆಣಸು, ಯಾಲಕ್ಕಿ ವ್ಯಾಪಾರಸ್ಥರ ಸಂಘದ ಉಪಾಧ್ಯಕ್ಷ ಲಕ್ಷ್ಮೀನಾರಾಯಣ ಹೆಗಡೆ ಒತ್ತಾಯಿಸಿದ್ದಾರೆ.