ದೇಶ ಕೊರೊನಾ ಸೋಂಕಿನ ಸಂಕಷ್ಟದಲ್ಲಿರುವಾಗ ಅರ್ನಾಬ್ ಗೋಸ್ವಾಮಿ ಪ್ರಚೋದನಕಾರಿ ಹೇಳಿಕೆ ನೀಡಿ ಹಿಂದೂ-ಮುಸ್ಲಿಮರ ನಡುವೆ ದ್ವೇಷದ ವಿಷ ಬೀಜ ಬಿತ್ತುತ್ತಿದ್ದಾರೆ. ಸೋನಿಯಾ ವಿರುದ್ಧ ಆಧಾರ ರಹಿತ ಹೇಳಿಕೆ ನೀಡಿದ್ದಾರೆ. ವಿನಾಕಾರಣ ಕಾಂಗ್ರೆಸ್ ದೂಷಿಸಿದ್ದಾರೆ. ಅವರ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಜಿಲ್ಲಾ ಘಟಕದ ಅಧ್ಯಕ್ಷ ಎಂ.ಪ್ರವೀಣ್ ಕುಮಾರ್, ಕಾರ್ಯದರ್ಶಿ ಟಿ.ವಿ.ರಂಜಿತ್ ದೂರಿನಲ್ಲಿ ಕೋರಿದ್ದಾರೆ.