‘ಲಾಕ್ಡೌನ್ ಪರಿಣಾಮ ವಲಸೆ ಕಾರ್ಮಿಕರನ್ನು ತಾತ್ಕಾಲಿಕ ಆಶ್ರಯ ಕೇಂದ್ರಗಳಲ್ಲಿ 14 ದಿನಗಳ ಕ್ವಾರಂಟೈನ್ಗೆ ಒಳಪಡಿಸಲಾಗಿತ್ತು. ಅವರಲ್ಲಿ ಕೋವಿಡ್-19 ರೋಗ ಲಕ್ಷಣ ಕಂಡು ಬರದಿದ್ದರೂ, ಆಶ್ರಯ ಕೇಂದ್ರಗಳಲ್ಲಿ ಇರಿಸಲಾಗಿದೆ. ಇದು ಅವೈಜಾನಿಕ. ಆದ್ದರಿಂದ, ನೆಗೆಟಿವ್ ಬಂದಿರುವ ಪ್ರಕರಣಗಳಲ್ಲಿ ಅಂತಹವರನ್ನುಸರ್ಕಾರದ ಸಾರಿಗೆ ಮೂಲಕ ಅವರ ಸ್ವಂತ ಊರಿಗೆ ಕಳುಹಿಸಿಕೊಡುವ ವ್ಯವಸ್ಥೆ ಮಾಡುವಂತೆ ಸರ್ಕಾರಕ್ಕೆ ನಿರ್ದೇಶಿಸಬೇಕು’ ಎಂದು ಅರ್ಜಿದಾರರು ಕೋರಿದ್ದರು.