ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊರೊನಾ ಹರಡಲು ಮುಸ್ಲಿಮರು ಕಾರಣ ಎಂದ ಇಬ್ಬರು ಶಾಸಕರನ್ನು ಬಂಧಿಸಿ: ಸಿದ್ದರಾಮಯ್ಯ

Last Updated 8 ಏಪ್ರಿಲ್ 2020, 8:25 IST
ಅಕ್ಷರ ಗಾತ್ರ

ಬೆಂಗಳೂರು: ‘ಕೊರೊನಾ ಹರಡಲು ಮುಸ್ಲಿಮರು ಕಾರಣ, ಅವರನ್ನು ಗುಂಡಿಕ್ಕಿ ಕೊಲ್ಲಿ ಎಂದು ಹೇಳಿಕೆ ನೀಡಿದ ಬಿಜೆಪಿ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಮತ್ತು ಎಂ.ಪಿ.ರೇಣುಕಾಚಾರ್ಯ ಅವರನ್ನು ಬಂಧಿಸಬೇಕು‌’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

’ಇಬ್ಬರೂ ಶಾಸಕರು ಪ್ರಚೋದನಾಕಾರಿಯಾಗಿ ಮಾತನಾಡಿದ್ದಾರೆ.. ರೇಣುಕಾಚಾರ್ಯ ಅವರಂತೂ ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ. ಅವರನ್ನು ಈ ಹುದ್ದೆಯಿಂದ ಕೂಡಲೇ ವಜಾ ಮಾಡಬೇಕು. ಇವರಿಬ್ಬರೂ ಶಾಸಕರಾಗಿ ಇರಲು ಅರ್ಹರಲ್ಲ’ ಎಂದು ಬುಧವಾರ ಇಲ್ಲಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.

'ಮುಂಗಾರು ಪೂರ್ವ ಗಾಳಿ, ಮಳೆಯಿಂದ ಕೆಲವೆಡೆ ಬಾಳೆ, ಭತ್ತ ಬೆಳೆ ನಾಶವಾಗಿದೆ. ಕೆಲವೆಡೆ ಆಲಿಕಲ್ಲು ಮಳೆಯಾಗಿದೆ. ಇದರ ಸಮೀಕ್ಷೆ ನಡೆಸಿ ಪರಿಹಾರ ನೀಡಬೇಕು’ ಎಂದು ಆಗ್ರಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT