ಆಸಕ್ತ ತೆಂಕು ಮತ್ತು ಬಡಗುತಿಟ್ಟಿನ ಕಲಾವಿದರಿಗಾಗಿ "ಕೊರೊನಾ ದಿಗ್ಬಂಧನ - ನಾನು ಕಲಿತ ಪಾಠಗಳು" ಎಂಬ ವಿಷಯದಲ್ಲಿ ಲೇಖನ ಬರೆಯುವ ಸ್ಫರ್ಧೆಯಿದು. ಯಕ್ಷಗಾನದ ವೃತ್ತಿ ಕಲಾವಿದರು, ಹವ್ಯಾಸಿ ಕಲಾವಿದರು ಮತ್ತು ತಾಳಮದ್ದಳೆ ಅರ್ಥಧಾರಿಗಳಿಗಾಗಿ ಪ್ರತ್ಯೇಕವಾದ ಮೂರು ವಿಭಾಗಗಳಲ್ಲಿ ಸ್ಫರ್ಧೆ ನಡೆಯಲಿದ್ದು, ಅನುಕ್ರಮವಾಗಿ 3000, 2000 ಹಾಗೂ 1000 ರೂ. ಬಹುಮಾನಗಳನ್ನು ನೀಡಲಾಗುತ್ತದೆ ಎಂದು ಪ್ರತಿಷ್ಠಾನವು ತಿಳಿಸಿದೆ. ಧರ್ಮಸ್ಥಳ ಯಕ್ಷಗಾನ ಮೇಳದ ಭಾಗವತರಾದ ಸಿರಿಬಾಗಿಲು ರಾಮಕೃಷ್ಣ ಮಯ್ಯ ಅವರ ಮುಂದಾಳುತ್ವದ ಸಿರಿಬಾಗಿಲು ಪ್ರತಿಷ್ಠಾನವು ಇತ್ತೀಚೆಗೆ ಆನ್ಲೈನ್ ವೀಕ್ಷಕರಿಗಾಗಿ ಕೊರೊನಾಸುರ ಕಾಳಗ ಎಂಬ ಯಕ್ಷಗಾನವನ್ನು ನಿರ್ಮಿಸಿ ಹೊಸ ಸಾಧ್ಯತೆಯತ್ತ ಗಮನ ಸೆಳೆದಿತ್ತು.