ರಾಜ್ಯದ ಸಮಸ್ತ ಭಾರವನ್ನು ಹೊತ್ತಿರುವ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ಶಿಕ್ಷಣ ಇಲಾಖೆ ಬಗ್ಗೆ ಗಮನಕೊಡುವಷ್ಟು ಪುರುಸೊತ್ತಿಲ್ಲ ಎಂದು ಅವರು ಮಾಧ್ಯಮಗೋಷ್ಠಿಯಲ್ಲಿ ತಿಳಿಸಿದರು. ಕುಮಾರಸ್ವಾಮಿಗೆ ಅವರ ಬಳಿ ಇರುವ ಖಾತೆಗಳನ್ನು ನಿಭಾಯಿಸುವುದೇ ಕಷ್ಟವಾಗಿದೆ. ಜನ ಸಾಮಾನ್ಯರ ಮಾತಿರಲಿ, ಶಿಕ್ಷಣ ಕ್ಷೇತ್ರಗಳನ್ನು ಪ್ರತಿನಿಧಿಸುವ ವಿಧಾನಪರಿಷತ್ ಸದಸ್ಯರು ಭೇಟಿ ಮಾಡಿ ಸಮಸ್ಯೆಗಳ ಬಗ್ಗೆ ಚರ್ಚಿಸಲು ಸಾಧ್ಯವಿಲ್ಲ. ಯಾರ ಮಾತಿಗೂ ಬೆಲೆ ಕೊಡುತ್ತಿಲ್ಲ ಎಂದರು.