ಮಂಡ್ಯ: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮಾತಿಗೆ ಆಕ್ಷೇಪ ವ್ಯಕ್ತಪಡಿಸಿದ ರೈತರೊಬ್ಬರಿಗೆ ಜೆಡಿಎಸ್ ಕಾರ್ಯಕರ್ತರು ಗುರುವಾರ ರಾತ್ರಿ ಮದ್ದೂರು ತಾಲ್ಲೂಕಿನ ಅಜ್ಜಹಳ್ಳಿ ಗ್ರಾಮದಲ್ಲಿ ಹಲ್ಲೆ ನಡೆಸಿದ್ದಾರೆ.
ಪ್ರಚಾರ ಮಾಡುವ ಸಂದರ್ಭದಲ್ಲಿ ರೈತರೊಬ್ಬರು, ಕಬ್ಬಿನ ಬಾಕಿ ಹಣ ಕೊಟ್ಟಿಲ್ಲ, ಭತ್ತಕ್ಕೆ ಬೆಂಬಲ ಬೆಲೆಯನ್ನೂ ನೀಡಿಲ್ಲ, ರೈತರ ಸಾಲವೂ ಮನ್ನಾ ಆಗಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು.
ಇದರಿಂದ ಕೆರಳಿದ ಜೆಡಿಎಸ್ ಕಾರ್ಯಕರ್ತರು ಆ ರೈತನ ಮೇಲೆ ಹಲ್ಲೆ ಮಾಡಿದ್ದಾರೆ. ಮುಖ್ಯಮಂತ್ರಿ ಸಮ್ಮುಖದಲ್ಲೇ ರೈತನ ಮೇಲೆ ಹಲ್ಲೆ ಮಾಡಲಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.