ವಿಧಾನಸಭೆಯಲ್ಲಿ ಶುಕ್ರವಾರ ಶೂನ್ಯ ವೇಳೆಯಲ್ಲಿ ಜೆಡಿಎಸ್ ಶಾಸಕ ನಾಗನಗೌಡ ವಿಷಯ ಪ್ರಸ್ತಾಪಿಸಿ, ‘ಸ್ವಾತಂತ್ರ್ಯ ದಿನಾಚರಣೆಯ ದಿನ ದೆಹಲಿಯಲ್ಲಿ ಪ್ರಧಾನಿ, ಬೆಂಗಳೂರಿನಲ್ಲಿ ಮುಖ್ಯಮಂತ್ರಿ, ಜಿಲ್ಲಾ ಕೇಂದ್ರದಲ್ಲಿ ಉಸ್ತುವಾರಿ ಸಚಿವರು ಧ್ವಜಾರೋಹಣ ನೆರವೇರಿಸುತ್ತಾರೆ. ಆದರೆ, ತಾಲ್ಲೂಕು ಕೇಂದ್ರದಲ್ಲಿ ತಹಶೀಲ್ದಾರ್ ಈ ಕೆಲಸ ಮಾಡುತ್ತಾರೆ. ಇದು ಸರಿಯಲ್ಲ‘ ಎಂದರು.