‘ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಎಸ್ಐಟಿ ರಚನೆ ಮಾಡಿದ್ದರು. ಅದರ ಬಗ್ಗೆ ಎಚ್.ಡಿ.ಕುಮಾರಸ್ವಾಮಿ ಅವರು ಟೀಕೆ ಮಾಡಿದ್ದರು. ಈ ಪ್ರಕರಣ ಏನಾಗಿದೆ ಎಂಬುದು ಎಲ್ಲರಿಗೂ ಗೊತ್ತಿದೆ. ಎಸ್ಐಟಿ ತನಿಖೆಯಿಂದ ಯಾವ ಸಾಧನೆಯೂ ಆಗುವುದಿಲ್ಲ. ಶೇ 60ರಷ್ಟು ಶಾಸಕರು ಪೊಲೀಸ್ ಕಿರುಕುಳಕ್ಕೆ ಒಳಗಾಗಿದ್ದಾರೆ. ಎಸ್ಐಟಿ ಜತೆಗೆ ಸ್ನೇಹವೂ ಒಳ್ಳೆಯದಲ್ಲ, ದ್ವೇಷವೂ ಉತ್ತಮವಲ್ಲ’ ಎಂದು ಪ್ರತಿಪಾದಿಸಿದರು.