ಕೇಂದ್ರದ ಸೂಚನೆಯಂತೆ ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಬೆಂಗಳೂರು ಗ್ರಾಮಾಂತರ, ರಾಮನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ, ಬಾಗಲಕೋಟೆ, ಗದಗ, ಬೆಳಗಾವಿ, ಹಾಸನ ಜಿಲ್ಲೆಯಲ್ಲಿ ಯೋಜನೆ ಕಾರ್ಯಗತಗೊಳಿಸಲಾಗುತ್ತಿದೆ ಎಂದರು.
ಬೆಂಗಳೂರಿನ ಬೆಳ್ಳಂದೂರು ಕೆರೆಯ ಹೂಳು ತೆಗೆಯಲು ₹300 ಕೋಟಿ ಬಂದಿದೆ, ಆದರೆ, ಹೂಳು ತೆಗೆಯಲು ಆಗುತ್ತಿಲ್ಲ. ಪ್ರತಿನಿತ್ಯ ಏನಿಲ್ಲ ಅಂದರೂ 300 ರಿಂದ 400 ಲಾರಿ ಲೋಡ್ಗಳಷ್ಟು ಹೂಳು ತೆಗೆದು ಸಾಗಿಸಬೇಕು. ಇದಕ್ಕೆ ಸಾರ್ವಜನಿಕರು ಆಕ್ಷೇಪ ಎತ್ತಬಹುದು. ಹೂಳು ತೆಗೆಯಲು ಹಸಿರು ಪೀಠ ಸೂಚನೆ ನೀಡಿದೆ. ಹೂಳು ತೆಗೆಯಲು 2 ವರ್ಷವಾದರೂ ಬೇಕು. ಅದನ್ನು ಕಾರ್ಯಗತಗೊಳಿಸುವುದು ಹೇಗೆ ಎಂಬ ಜಿಜ್ಞಾಸೆ ಕಾಡಿದೆ. ಇದಕ್ಕೆ ಸಾರ್ವಜನಿಕರ ಸಹಕಾರವೂ ಬೇಕು ಎಂದರು.