ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಥಣಿ ಪಿಎಸ್ಐ ಅಮಾನತು

ಅಕ್ರಮ ಮರಳು ಸಾಗಣೆ ತಡೆಯುವಲ್ಲಿ ವಿಫಲ ಆರೋಪ
Last Updated 9 ಜನವರಿ 2020, 7:01 IST
ಅಕ್ಷರ ಗಾತ್ರ

ಬೆಳಗಾವಿ: ತಮ್ಮ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಮರಳು ದಂಧೆಗೆ ಕಡಿವಾಣ ಹಾಕುವಲ್ಲಿ ನಿರ್ಲಕ್ಷ್ಯ ‌ವಹಿಸಿದರೆಂಬ ಆರೋಪದ ಮೇಲೆ ಅಥಣಿ ಪೊಲೀಸ್ ಠಾಣೆ ಪಿಎಸ್ಐ ಉಸ್ಮಾನಸಾಬ್ ಅವಟಿ ಅವರನ್ನು ಅಮಾನತು ಮಾಡಲಾಗಿದೆ ಎಂದು ಎಸ್ಪಿ ಲಕ್ಷ್ಮಣ ನಿಂಬರಗಿ ತಿಳಿಸಿದ್ದಾರೆ.

ಅಥಣಿ ತಾಲ್ಲೂಕಿನ ಅಗ್ರಾಣಿ ಹಳ್ಳದ ದಂಡೆಯಲ್ಲಿ ಅಕ್ರಮ ಮರಳು ಸಾಗಣೆ ಅವ್ಯಾಹತವಾಗಿ ನಡೆಯುತ್ತಿರುವ ಬಗ್ಗೆ ಸ್ಥಳೀಯರು ದೂರು ನೀಡಿದರೂ ಕ್ರಮ ಕೈಗೊಂಡಿರಲಿಲ್ಲ. ಈ ದೂರು ಎಸ್ಪಿ ಕಚೇರಿವರೆಗೂ ಹೋಗಿತ್ತು. ಇದರ ಆಧಾರದ ಮೇಲೆ ಎಸ್ ಐ ವಿರುದ್ಧ ಕ್ರಮ ವಹಿಸಲಾಗಿದೆ. ಡಿಸಿಐಬಿ ಪೊಲೀಸರು ದಾಳಿ ನಡೆಸಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಐದು ಲಾರಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT