ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಲ್ಲೆ ಪ್ರಕರಣ: ಶಾಸಕ ತನ್ವೀರ್ ಸೇಠ್ ಆರೋಗ್ಯದಲ್ಲಿ ಚೇತರಿಕೆ

Last Updated 19 ನವೆಂಬರ್ 2019, 5:07 IST
ಅಕ್ಷರ ಗಾತ್ರ

ಮೈಸೂರು: ಹಲ್ಲೆಗೆ ಒಳಗಾಗಿ ಇಲ್ಲಿನ ಕೊಲಂಬಿಯಾ ಏಷಿಯಾ ಆಸ್ಪತ್ರೆಗೆ ದಾಖಲಾಗಿರುವ ಶಾಸಕ ತನ್ವೀರ್ ಸೇಠ್ ಅವರ ಆರೋಗ್ಯದಲ್ಲಿ ಮಂಗಳವಾರ ಚೇತರಿಕೆ ಕಂಡು ಬಂದಿದೆ‌.

ಈ ಕುರಿತು ಪ್ರತಿಕ್ರಿಯಿಸಿರುವ ಆಸ್ಪತ್ರೆಯ ವೈದ್ಯಕೀಯ ಸೇವೆಗಳ ಅಧೀಕ್ಷಕ ಡಾ.ಉಪೇಂದ್ರ ಶೆಣೈ, ‘ತನ್ವೀರ್ ಸೇಠ್ ಚಿಕಿತ್ಸೆಗೆ ಉತ್ತಮವಾಗಿಯೆ ಸ್ಪಂದಿಸುತ್ತಿದ್ದಾರೆ. ಸಂಜೆ ವೇಳೆಗೆ ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಲಾಗುವುದು’ಎಂದು ಹೇಳಿದ್ದಾರೆ.

ಈ ಮಧ್ಯೆ ತನ್ವೀರ್ ಸೇಠ್ ಅವರ ಗನ್ ಮ್ಯಾನ್ ಫೈರೋಜ್ ಖಾನ್ ಅವರನ್ನು ಅಮಾನತುಪಡಿಸಲಾಗಿದೆ. ಫೈರೋಜ್ ಖಾನ್ ಇದ್ದಾಗ್ಯೂ ತನ್ವೀರ್ ಸೇಠ್ ಮೇಲೆ ಹಲ್ಲೆ ನಡೆಸಿರುವುದು ಭದ್ರತಾಲೋಪ ಎಂದು ಪರಿಗಣಿಸಿ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ.

ರಾತ್ರಿ ಇಡೀ ವಿಚಾರಣೆ: ಹಲ್ಲೆಗೆ ಸಂಬಂಧಿಸಿದಂತೆ ವಶಕ್ಕೆ ತೆಗೆದುಕೊಂಡಿರುವ 10 ಮಂದಿಯನ್ನು ಪೊಲೀಸರು ಅಜ್ಞಾತಸ್ಥಳದಲ್ಲಿ ರಾತ್ರಿ ಇಡಿ ವಿಚಾರಣೆ ನಡೆಸಿದ್ದಾರೆ. ಇನ್ನಷ್ಟು ಮಂದಿಯ ಹುಡುಕಾಟದಲ್ಲಿ ತೊಡಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT