ಬಂಟ್ವಾಳ: ತಾಲ್ಲೂಕಿನ ಕುಡಂಬೆಟ್ಟು ಗ್ರಾಮದ ಹಲೆಪ್ಪಾಡಿ ಮುಂಡೊಟ್ಟು ಎಂಬಲ್ಲಿ ಗುರುವಾರ ಬೆಳಿಗ್ಗೆ ಆಶಾ ಕಾರ್ಯಕರ್ತೆ ಮಮತಾ ಗಟ್ಟಿ ಅವರ ಮೇಲೆ ಹಲ್ಲೆ ನಡೆದಿದೆ.
ಇಲ್ಲಿಗೆ ಸಮೀಪದ ವಾಮದಪದವು ಸಮುದಾಯ ಆರೋಗ್ಯ ಕೇಂದ್ರ ವ್ಯಾಪ್ತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಅವರ ಮೇಲೆ ಇಲ್ಲಿನ ಮಜಲು ನಿವಾಸಿ ಕಾಂತಪ್ಪ ಪೂಜಾರಿ ಎಂಬಾತ ಹಲ್ಲೆ ನಡೆಸಿದ್ದಾನೆ.
‘ಕರ್ತವ್ಯ ನಿಮಿತ್ತ ರಸ್ತೆಯಲ್ಲಿ ತೆರಳುತ್ತಿದ್ದ ಮಮತಾ ಅವರ ಮೇಲೆ ಆರೋಪಿಯು ಏಕಾಏಕಿ ದೊಣ್ಣೆಯಿಂದ ಹಲ್ಲೆ ನಡೆಸಿದ್ದಾನೆ. ಆದರೆ, ಹಲ್ಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ’ ಎಂದು ಮಮತಾ ಅವರ ಸಮೀಪದ ಸಂಬಂಧಿ ಪ್ರಕಾಶ್ ಗಟ್ಟಿ ತಿಳಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.