ವೈಯಾಲಿಕಾವಲ್ನ ಜೆ.ಡಿ. ಪಾರ್ಕ್ ಬಡಾವಣೆಯಲ್ಲಿರುವ ಘಾಟೆ ಭವನಕ್ಕೆ (ಸಿಪಿಐ ಬೆಂಗಳೂರು ಜಿಲ್ಲಾ ಮಂಡಳಿ ಕಚೇರಿ) ಮಂಗಳವಾರ ರಾತ್ರಿ ಒಂದು ಗಂಟೆ ಸುಮಾರಿಗೆ ಎರಡು ದ್ವಿಚಕ್ರ ವಾಹನಗಳಲ್ಲಿ ಬಂದ ನಾಲ್ವರು ದುಷ್ಕರ್ಮಿಗಳು, ಕಚೇರಿಯ ಕಬ್ಬಿಣದ ಬಾಗಿಲಿಗೆ ಪೆಟ್ರೋಲ್ ಸುರಿದು, ಬಳಿಕ ಕಚೇರಿ ಮುಂಭಾಗ ನಿಂತಿದ್ದ ಆರು ದ್ವಿಚಕ್ರ ವಾಹನಗಳಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ. ಪರಿಣಾಮ ಎರಡು ವಾಹನಗಳು ಸುಟ್ಟು ಕರಕಲಾಗಿದ್ದು, ನಾಲ್ಕು ವಾಹನಗಳಿಗೆ ಹಾನಿಯಾಗಿವೆ. ಕಬ್ಬಿಣದ ಬಾಗಿಲು ಕೂಡಾ ಸುಟ್ಟಿದೆ ಎಂದು ಪೊಲೀಸರು ತಿಳಿಸಿದರು.