ಮಂಗಳೂರು: ಕವಿ ಅಮ್ಮೆಂಬಳ ಶಂಕರನಾರಾಯಣ ನಾವಡ ಪ್ರತಿಷ್ಠಾನ ನೀಡುವ ‘ಅಮ್ಮೆಂಬಳ ಸಾಹಿತ್ಯ ಪ್ರಶಸ್ತಿ’ಗಳನ್ನು ವಿಜಯಪುರದ ಸಂಶೋಧಕ ಡಾ.ಕೃಷ್ಣ ಕೊಲ್ಹಾರ ಕುಲಕರ್ಣಿ (2017), ಮೈಸೂರಿನ ಡಾ.ಕಬ್ಬಿನಾಲೆ ವಸಂತ ಭಾರದ್ವಾಜ (2018) ಹಾಗೂ ಬೆಂಗಳೂರಿನ ಪ್ರೊ.ಮಲ್ಲೇಪುರಂ ಜಿ. ವೆಂಕಟೇಶ್ (2019) ಅವರಿಗೆ ನೀಡಲಾಗುವುದು ಎಂದು ಪ್ರತಿಷ್ಠಾನದ ಸಂಚಾಲಕ ಪ್ರೊ.ಎ.ವಿ. ನಾವಡ ಹಾಗೂ ಡಾ.ಗಾಯತ್ರೀ ನಾವಡ ತಿಳಿಸಿದ್ದಾರೆ.