ಸಂತ್ರಸ್ತರಿಗೆ ಪರಿಹಾರ: ‘ಕೇರಳ ಮತ್ತು ಕೊಡಗಿನಲ್ಲಿ ನೆರೆಹಾವಳಿ ಸಂತ್ರಸ್ತರಿಗೆ ನೆರವಾಗಲು 1.2 ಲಕ್ಷ ಸ್ವಯಂಸೇವಕರು ಪರಿಹಾರ ಕಾರ್ಯದಲ್ಲಿ ನಿರತರಾಗಿದ್ದಾರೆ. 650 ವೈದ್ಯರು ಆರೋಗ್ಯ ತಪಾಸಣೆ ಮಾಡುತ್ತಿದ್ದಾರೆ. 300 ಪರಿಹಾರ ಶಿಬಿರ ಸ್ಥಾಪಿಸಲಾಗಿದ್ದು, ಏಳು ಸಾವಿರ ಜನರನ್ನು ರಕ್ಷಿಸಲಾಗಿದೆ. ಸೆ.1ರಿಂದ ನೆರೆ ಪ್ರದೇಶದಲ್ಲಿಯ ಮನೆ, ಜಮೀನು ಮತ್ತು ಧಾರ್ಮಿಕ ಕೇಂದ್ರಗಳ ಸ್ವಚ್ಛತೆ ಆರಂಭಿಸಲಾಗಿದೆ. ಒಟ್ಟು ಎರಡು ಲಕ್ಷ ಜನರು ಜೊತೆಗೂಡಿ ಕೆಲಸ ಮಾಡುತ್ತಿದ್ದಾರೆ’ ಎಂದು ತಿಳಿಸಿದರು.