<p><strong>ಮಂಗಳೂರು: </strong>ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಮಾಡುವಂತೆ ಕರಾವಳಿಯಿಂದಲೇ ಕೇಂದ್ರ ಸರ್ಕಾರಕ್ಕೆ ಸ್ಪಷ್ಟ ಸಂದೇಶ ರವಾನಿಸಿದ್ದ ವಿಎಚ್ಪಿ ಹಾಗೂ ಆರ್ಎಸ್ಎಸ್, ಈ ಬಾರಿ ಮತ್ತೊಮ್ಮೆ ಕರಾವಳಿಯಲ್ಲಿ ಬೈಠಕ್ ನಡೆಸುವ ಮೂಲಕ ರಾಮ ಮಂದಿರ ನಿರ್ಮಾಣ ರೂಪುರೇಷೆಗಳನ್ನು ಸಿದ್ಧಪಡಿಸುವ ಚಿಂತನೆಯಲ್ಲಿದೆ.</p>.<p>ಡಿಸೆಂಬರ್ನಲ್ಲಿ ರಾಷ್ಟ್ರೀಯ ಬೈಠಕ್ ನಡೆಸಲು ಚಿಂತನೆ ಮಾಡಲಾಗಿದ್ದು, ನಗರದ ಸಂಘನಿಕೇತನದಲ್ಲಿ ದೇಶದ ನಾನಾ ಭಾಗಗಳಿಂದ ಆರ್ಎಸ್ಎಸ್ನ ಪ್ರಚಾರಕರು, ವಿಎಚ್ಪಿ ಪ್ರಮುಖರು ಭಾಗವಹಿಸಲಿದ್ದಾರೆ. ಈ ಮೂಲಕ ರಾಮ ಮಂದಿರ ನಿರ್ಮಾಣಕ್ಕೆ ಕರಾವಳಿಯಿಂದಲೇ ಸ್ಪಷ್ಟ ಯೋಜನೆಗಳನ್ನು ರೂಪಿಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.</p>.<p>ಆರ್ಎಸ್ಎಸ್ ಸರಕಾರ್ಯವಾಹ ಸುರೇಶ ಭೈಯ್ಯಾಜಿ ಜೋಷಿ ಮಾರ್ಗದರ್ಶನದಲ್ಲಿ ನಡೆಯಲಿರುವ ಬೈಠಕ್ನಲ್ಲಿ ಮಂದಿರ ನಿರ್ಮಾಣಕ್ಕೆ ಅಗತ್ಯವಿರುವ ಯೋಜನೆಗಳನ್ನು ಶೀಘ್ರದಲ್ಲಿ ಅನುಷ್ಠಾನಗೊಳಿಸುವಂತೆ ಮತ್ತೊಮ್ಮೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ಸಾಧ್ಯತೆಗಳು ದಟ್ಟವಾಗಿವೆ.</p>.<p>‘ನಗರದಲ್ಲಿ ವಿಎಚ್ಪಿ ಬೈಠಕ್ ನಡೆಯಲಿದ್ದು, ಇದಕ್ಕಾಗಿ ಈಗಾಗಲೇ ಸಿದ್ಧತೆಗಳನ್ನು ಮಾಡಲಾಗುತ್ತಿದೆ. ಬೈಠಕ್ನಲ್ಲಿ ಯಾವೆಲ್ಲ ವಿಷಯಗಳು ಚರ್ಚೆಯಾಗಲಿವೆ ಎಂಬುದನ್ನು ಹಿರಿಯರು ನಿರ್ಧರಿಸಲಿದ್ದಾರೆ. ಸುಪ್ರೀಂ ಕೋರ್ಟ್ ತೀರ್ಪು ಬಂದಿರುವುದರಿಂದ ಈ ಬಾರಿಯ ಬೈಠಕ್ನಲ್ಲಿ ಅಯೋ ಧ್ಯೆಯ ರಾಮಮಂದಿರ ನಿರ್ಮಾಣದ ಕುರಿತು ವಿಸ್ತೃತ ಚರ್ಚೆ ಆಗುವ ಸಾಧ್ಯತೆ ಗಳು ಇವೆ’ ಎಂದು ವಿಶ್ವ ಹಿಂದೂ ಪರಿಷತ್ನ ಜಗದೀಶ್ ಶೇಣವ ತಿಳಿಸಿದ್ದಾರೆ.<br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು: </strong>ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಮಾಡುವಂತೆ ಕರಾವಳಿಯಿಂದಲೇ ಕೇಂದ್ರ ಸರ್ಕಾರಕ್ಕೆ ಸ್ಪಷ್ಟ ಸಂದೇಶ ರವಾನಿಸಿದ್ದ ವಿಎಚ್ಪಿ ಹಾಗೂ ಆರ್ಎಸ್ಎಸ್, ಈ ಬಾರಿ ಮತ್ತೊಮ್ಮೆ ಕರಾವಳಿಯಲ್ಲಿ ಬೈಠಕ್ ನಡೆಸುವ ಮೂಲಕ ರಾಮ ಮಂದಿರ ನಿರ್ಮಾಣ ರೂಪುರೇಷೆಗಳನ್ನು ಸಿದ್ಧಪಡಿಸುವ ಚಿಂತನೆಯಲ್ಲಿದೆ.</p>.<p>ಡಿಸೆಂಬರ್ನಲ್ಲಿ ರಾಷ್ಟ್ರೀಯ ಬೈಠಕ್ ನಡೆಸಲು ಚಿಂತನೆ ಮಾಡಲಾಗಿದ್ದು, ನಗರದ ಸಂಘನಿಕೇತನದಲ್ಲಿ ದೇಶದ ನಾನಾ ಭಾಗಗಳಿಂದ ಆರ್ಎಸ್ಎಸ್ನ ಪ್ರಚಾರಕರು, ವಿಎಚ್ಪಿ ಪ್ರಮುಖರು ಭಾಗವಹಿಸಲಿದ್ದಾರೆ. ಈ ಮೂಲಕ ರಾಮ ಮಂದಿರ ನಿರ್ಮಾಣಕ್ಕೆ ಕರಾವಳಿಯಿಂದಲೇ ಸ್ಪಷ್ಟ ಯೋಜನೆಗಳನ್ನು ರೂಪಿಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.</p>.<p>ಆರ್ಎಸ್ಎಸ್ ಸರಕಾರ್ಯವಾಹ ಸುರೇಶ ಭೈಯ್ಯಾಜಿ ಜೋಷಿ ಮಾರ್ಗದರ್ಶನದಲ್ಲಿ ನಡೆಯಲಿರುವ ಬೈಠಕ್ನಲ್ಲಿ ಮಂದಿರ ನಿರ್ಮಾಣಕ್ಕೆ ಅಗತ್ಯವಿರುವ ಯೋಜನೆಗಳನ್ನು ಶೀಘ್ರದಲ್ಲಿ ಅನುಷ್ಠಾನಗೊಳಿಸುವಂತೆ ಮತ್ತೊಮ್ಮೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ಸಾಧ್ಯತೆಗಳು ದಟ್ಟವಾಗಿವೆ.</p>.<p>‘ನಗರದಲ್ಲಿ ವಿಎಚ್ಪಿ ಬೈಠಕ್ ನಡೆಯಲಿದ್ದು, ಇದಕ್ಕಾಗಿ ಈಗಾಗಲೇ ಸಿದ್ಧತೆಗಳನ್ನು ಮಾಡಲಾಗುತ್ತಿದೆ. ಬೈಠಕ್ನಲ್ಲಿ ಯಾವೆಲ್ಲ ವಿಷಯಗಳು ಚರ್ಚೆಯಾಗಲಿವೆ ಎಂಬುದನ್ನು ಹಿರಿಯರು ನಿರ್ಧರಿಸಲಿದ್ದಾರೆ. ಸುಪ್ರೀಂ ಕೋರ್ಟ್ ತೀರ್ಪು ಬಂದಿರುವುದರಿಂದ ಈ ಬಾರಿಯ ಬೈಠಕ್ನಲ್ಲಿ ಅಯೋ ಧ್ಯೆಯ ರಾಮಮಂದಿರ ನಿರ್ಮಾಣದ ಕುರಿತು ವಿಸ್ತೃತ ಚರ್ಚೆ ಆಗುವ ಸಾಧ್ಯತೆ ಗಳು ಇವೆ’ ಎಂದು ವಿಶ್ವ ಹಿಂದೂ ಪರಿಷತ್ನ ಜಗದೀಶ್ ಶೇಣವ ತಿಳಿಸಿದ್ದಾರೆ.<br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>