ಪೇಜಾವರ ಮಠದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತೀರ್ಪು ಹಿಂದೂಗಳ ಪರವಾಗಿ ಬರುವ ವಿಶ್ವಾಸವಿದೆ. ಆದರೆ, ನಿಶ್ಚಿತವಾಗಿ ಹೇಳಲಾಗುವುದಿಲ್ಲ. ಹಿಂದೂಗಳ ಪರವಾಗಿ ಬಂದರೆ ಬೀದಿಗಿಳಿದು ವಿಜಯೋತ್ಸವ, ಮೆರವಣಿಗೆ ಮಾಡಬಾರದು. ಮುಸ್ಲಿಮರ ಪರವಾಗಿ ಬಂದರೂ ಪ್ರತಿಭಟನೆ ಮಾಡಬಾರದು. ಇದು ವಿಶ್ವಹಿಂದೂ ಪರಿಷತ್ ಹಾಗೂ ಸಾಧು–ಸಂತರ ನಿಲುವು ಎಂದು ಘೋಷಿಸಿದರು.