ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಪ್ರತಿಕ್ರಿಯಿಸಿದ ಅವರು, ' ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಿಸುವ ಹಿಂದೂ ಧರ್ಮೀಯರ ಬಹುದಿನಗಳ ಕನಸು ಈ ತೀರ್ಪಿನಿಂದ ನನಸಾಗಲಿದೆ. ಆದರೆ, ದೇವಾಲಯ ನಿರ್ಮಿಸುವ ಹೊಣೆ ಹೊರಲಿರುವ ಟ್ರಸ್ಟ್ ನಲ್ಲಿ ಯಾರು ಇರುತ್ತಾರೆ ಎಂಬುದು ಇನ್ನೂ ಖಚಿತವಾಗಿಲ್ಲ. ಟ್ರಸ್ಟ್ ಆರ್ ಎಸ್ ಎಸ್ ಪ್ರತಿನಿಧಿಗಳ ಹಿಡಿತದಲ್ಲೇ ಇರುತ್ತದೋ, ಬೇರೆಯವರು ಇರುತ್ತಾರೋ ನೋಡಬೇಕು.ಕೇಂದ್ರ ಸರ್ಕಾರ ಮತ್ತು ಉತ್ತರ ಪ್ರದೇಶ ಎರಡೂ ಕಡೆ ಬಿಜೆಪಿ ಸರ್ಕಾರಗಳೇ ಇವೆ. ಅವರು ಏನು ನಿರ್ಧರಿಸುತ್ತಾರೆ ಎಂಬುದನ್ನು ನೋಡಬೇಕು' ಎಂದರು.