<p><strong>ಬೆಂಗಳೂರು: </strong>ಅಯೋಧ್ಯೆಯಲ್ಲಿನ ರಾಮ ಜನ್ಮಭೂಮಿ–ಬಾಬರಿ ಮಸೀದಿಗೆ ಸಂಬಂಧಿಸಿದ ಬಹುಕಾಲದ ಅನಿಶ್ಚಿತ ಸ್ಥಿತಿ ಕೊನೆಗೊಂಡಿದ್ದು, ಈ ಐತಿಹಾಸಿಕ ತೀರ್ಪು ನೀಡಿದ ಐವರು ನ್ಯಾಯಮೂರ್ತಿಗಳಲ್ಲಿ ಒಬ್ಬರಾದಎಸ್.ಅಬ್ದುಲ್ ನಜೀರ್ ಕರ್ನಾಟಕದವರು.</p>.<p>ಕಾರ್ಕಳ ಸಮೀಪದ ಬೆಳುವಾಯಿ ಗ್ರಾಮದವರಾದ ಅಬ್ದುಲ್ ನಜೀರ್ ಅವರು ತಮ್ಮ ವಕೀಲಿ ವೃತ್ತಿಯನ್ನು ಕಾರ್ಕಳದ ವಕೀಲ ಎಮ್.ಕೆ ವಿಜಯಕುಮಾರ್ ಅವರ ಮಾರ್ಗದರ್ಶನದಲ್ಲಿ ಆರಂಭಿಸಿದರು. 1983ರಲ್ಲಿ ಬೆಂಗಳೂರಿಗೆ ಬಂದ ಅಬ್ದುಲ್ ನಜೀರ್ ಅವರು ಕರ್ನಾಟಕ ಹೈಕೋರ್ಟ್ನಲ್ಲಿ ಅಭ್ಯಾಸ ಮುಂದುವರಿಸಿದರು. 2004ರ ಸೆ. 24ರಂದು ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದರು. ಎರಡು ವರ್ಷಗಳ ಹಿಂದಷ್ಟೇ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾಗಿ ನೇಮಕಗೊಂಡಿದ್ದ ಇವರು,ಸುಪ್ರೀಂಕೋರ್ಟ್ನ ಏಕೈಕ ಮುಸ್ಲಿಂ ನ್ಯಾಯಮೂರ್ತಿ ಎನಿಸಿದ್ದಾರೆ.</p>.<p>ನಜೀರ್ಅವರು ಮೂಡಬಿದರೆ ಜೈನ್ ಪ್ರೌಢಶಾಲೆ, ಮಹಾವೀರ ಕಾಲೇಜು ಹಾಗೂ ಉಜಿರೆಯ ಎಸ್.ಡಿ.ಎಂ ಕಾಲೇಜಿನಲ್ಲಿ ತಮ್ಮ ವಿದ್ಯಾಭ್ಯಾಸ ಮಾಡಿದ್ದಾರೆ. ವೃತ್ತಿ ಜೀವನವನ್ನು ಆರಂಭಿಸಿ ಜನ ಮನ್ನಣೆ ಪಡೆದ ಅವರು ಬಹಳ ಸರಳ ಜೀವಿ.ಇವರ ನಡವಳಿಕೆಯ ಬಗ್ಗೆ ಎಲ್ಲರಿಗೂ ಗೌರವವಿದೆ.ತಲಾಕ್ ಕುರಿತು ತೀರ್ಪು ನೀಡಿದ ಪೀಠದಲ್ಲೂನಜೀರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಅಯೋಧ್ಯೆಯಲ್ಲಿನ ರಾಮ ಜನ್ಮಭೂಮಿ–ಬಾಬರಿ ಮಸೀದಿಗೆ ಸಂಬಂಧಿಸಿದ ಬಹುಕಾಲದ ಅನಿಶ್ಚಿತ ಸ್ಥಿತಿ ಕೊನೆಗೊಂಡಿದ್ದು, ಈ ಐತಿಹಾಸಿಕ ತೀರ್ಪು ನೀಡಿದ ಐವರು ನ್ಯಾಯಮೂರ್ತಿಗಳಲ್ಲಿ ಒಬ್ಬರಾದಎಸ್.ಅಬ್ದುಲ್ ನಜೀರ್ ಕರ್ನಾಟಕದವರು.</p>.<p>ಕಾರ್ಕಳ ಸಮೀಪದ ಬೆಳುವಾಯಿ ಗ್ರಾಮದವರಾದ ಅಬ್ದುಲ್ ನಜೀರ್ ಅವರು ತಮ್ಮ ವಕೀಲಿ ವೃತ್ತಿಯನ್ನು ಕಾರ್ಕಳದ ವಕೀಲ ಎಮ್.ಕೆ ವಿಜಯಕುಮಾರ್ ಅವರ ಮಾರ್ಗದರ್ಶನದಲ್ಲಿ ಆರಂಭಿಸಿದರು. 1983ರಲ್ಲಿ ಬೆಂಗಳೂರಿಗೆ ಬಂದ ಅಬ್ದುಲ್ ನಜೀರ್ ಅವರು ಕರ್ನಾಟಕ ಹೈಕೋರ್ಟ್ನಲ್ಲಿ ಅಭ್ಯಾಸ ಮುಂದುವರಿಸಿದರು. 2004ರ ಸೆ. 24ರಂದು ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದರು. ಎರಡು ವರ್ಷಗಳ ಹಿಂದಷ್ಟೇ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾಗಿ ನೇಮಕಗೊಂಡಿದ್ದ ಇವರು,ಸುಪ್ರೀಂಕೋರ್ಟ್ನ ಏಕೈಕ ಮುಸ್ಲಿಂ ನ್ಯಾಯಮೂರ್ತಿ ಎನಿಸಿದ್ದಾರೆ.</p>.<p>ನಜೀರ್ಅವರು ಮೂಡಬಿದರೆ ಜೈನ್ ಪ್ರೌಢಶಾಲೆ, ಮಹಾವೀರ ಕಾಲೇಜು ಹಾಗೂ ಉಜಿರೆಯ ಎಸ್.ಡಿ.ಎಂ ಕಾಲೇಜಿನಲ್ಲಿ ತಮ್ಮ ವಿದ್ಯಾಭ್ಯಾಸ ಮಾಡಿದ್ದಾರೆ. ವೃತ್ತಿ ಜೀವನವನ್ನು ಆರಂಭಿಸಿ ಜನ ಮನ್ನಣೆ ಪಡೆದ ಅವರು ಬಹಳ ಸರಳ ಜೀವಿ.ಇವರ ನಡವಳಿಕೆಯ ಬಗ್ಗೆ ಎಲ್ಲರಿಗೂ ಗೌರವವಿದೆ.ತಲಾಕ್ ಕುರಿತು ತೀರ್ಪು ನೀಡಿದ ಪೀಠದಲ್ಲೂನಜೀರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>