ಸುಂಟಿಕೊಪ್ಪ: ’ಬಾಬರಿ ತೀರ್ಪು, ನ್ಯಾಯದ ನಿರಾಕರಣೆ, ನ್ಯಾಯಕ್ಕಾಗಿ ಧ್ವನಿ ಎತ್ತಿರಿ’ ಎಂದು ಕನ್ನಡದಲ್ಲಿ ಮುದ್ರಿಸಿರುವ ಪೋಸ್ಟರ್ ಅನ್ನು ಅಂಟಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಘಟನೆಯೊಂದರ ವಿರುದ್ಧ ಸುಂಟಿಕೊಪ್ಪ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಇಲ್ಲಿನ ಗ್ರಾಮ ಪಂಚಾಯಿತಿ ಗೋಡೆ, ಬಸ್ ತಂಗುದಾಣದ ಗೋಡೆಯ ಮೇಲೆ ಈ ಭಿತ್ತಿಪತ್ರ ಅಂಟಿಸಲಾಗಿದೆ. ಸಾಮರಸ್ಯ ಕದಡುವ ಉದ್ದೇಶದಿಂದ ಕಿಡಿಗೇಡಿಗಳು ಈ ಕೃತ್ಯ ಎಸಗಿದ್ದು ಅವರನ್ನು ಪತ್ತೆಹಚ್ಚಿ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮ ಪಂಚಾಯಿತಿಯಿಂದ ದೂರು ನೀಡಲಾಗಿದೆ. ಪಿಎಸ್ಐ ತಿಮ್ಮಪ್ಪ ಅವರು ದೂರು ದಾಖಲಿಸಿಕೊಂಡಿದ್ದಾರೆ.