‘ಹತ್ಯೆ ನಡೆದು 24 ಗಂಟೆಯಲ್ಲೇ ಆರೋಪಿ ಸುಧೀರ್ ಅಂಗೂರ್ ಹಾಗೂ ವಿ.ವಿ ನೌಕರ ಸೂರಜ್ ಸಿಂಗ್ನನ್ನು ಬಂಧಿಸಲಾಗಿತ್ತು. ಇನ್ನೊಬ್ಬ ಆರೋಪಿ ಗಣೇಶ್ ಎಂಬಾತನನ್ನು ಕಾಲಿಗೆ ಗುಂಡು ಹಾರಿಸಿ ಸೆರೆಹಿಡಿಯಲಾಗಿತ್ತು. ಜಯಮಹಲ್ ನಿವಾಸಿ ಟಿ. ಕಾಂತರಾಜು ಅಲಿಯಾಸ್ ಕಾಟಪ್ಪ (28), ಜೆ.ಸಿ.ನಗರದ ಸುನೀಲ್ರಾವ್ ಅಲಿಯಾಸ್ ಅಪ್ಪು, ವಿನಯ್ (24) ಹಾಗೂ ಆರ್.ಟಿ.ನಗರದ ಫಯಾಜ್ (29) ಎಂಬುವರನ್ನು ಸದ್ಯ ಬಂಧಿಸಲಾಗಿದೆ’ ಎಂದು ಮಾಹಿತಿ ನೀಡಿದರು.