<p><strong>ಬೆಂಗಳೂರು</strong>: 'ಜೈ ಕಿಸಾನ್'ಎಂದು ಹೆಮ್ಮೆ ವ್ಯಕ್ತಪಡಿಸಿದ ಕೃಷಿ ಸಚಿವ ಬಿ.ಸಿ.ಪಾಟೀಲರು ಇದೀಗ 'ನೇಗಿಲ ಹಿಡಿದ ಹೊಲದೊಳು ಹಾಡುತ ಉಳುವ ಯೋಗಿಯ ನೋಡಲ್ಲಿ' ಎನ್ನುವ ರಾಷ್ಟ್ರಕವಿ ಕುವೆಂಪು ವಿರಚಿತ ಪದ್ಯವನ್ನು ಇನ್ನಷ್ಟು ಪ್ರಚುರಪಡಿಸಲು ಮುಂದಾಗಿದ್ದಾರೆ.</p>.<p>ಈ ಹಾಡು ಕರ್ನಾಟಕದಲ್ಲಿ ರೈತಗೀತೆಯೆಂದೇ ಪ್ರಖ್ಯಾತಿ ಹೊಂದಿದ್ದು, ಅನ್ನದಾತನ ಮಹತ್ವವೇನು? ಎನ್ನುವುದನ್ನು ಸಾರಿಸಾರಿ ಹೇಳುತ್ತದೆ. ಅಷ್ಟೇ ಅಲ್ಲ ಕಾರ್ಯಕ್ರಮಗಳಲ್ಲಿ ಈ ಗೀತೆ ಮೊಳಗುತ್ತಿದ್ದಂತೆಯೇ ಎದ್ದುನಿಂತು ಗೌರವವನ್ನೂ ಸೂಚಿಸಲಾಗುತ್ತದೆ.</p>.<p>ಇದೀಗ ಕೃಷಿ ಸಚಿವರು ರೈತರ ಮಹತ್ವವನ್ನು ಸಾರುವ ಈ ಹಾಡನ್ನು ಕೃಷಿ ವಿಶ್ವವಿದ್ಯಾಲಯದ ವಿಜ್ಞಾನಿಗಳು, ಅಧಿಕಾರಿಗಳು,ಸಿಬ್ಬಂದಿ, ಕೃಷಿ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಯೂ ಸೇರಿದಂತೆ ರೈತರು ತಾವು ಬಳಸುವ ಮೊಬೈಲ್ನ ಕಾಲರ್ ಟೋನ್,ರಿಂಗ್ ಟೋನ್ ಆಗಿ ಬಳಸುವಂತೆ ಸೂಚನೆ ನೀಡಿದ್ದಾರೆ.</p>.<p>ಕೆಲವು ದಿನಗಳ ಹಿಂದೆ 'ಹಲೋ'ಬದಲಿಗೆ 'ಜೈ ಕಿಸಾನ್'ಬಳಸುವಂತೆ ಸಚಿವರು ನಿರ್ದೇಶಿಸಿದ್ದರು.ಇದೀಗ ರೈತಗೀತೆಯನ್ನು ಕಾಲರ್ ರಿಂಗ್ ಟೋನಾಗಿ ಬಳಸಲು ಯೋಜನೆ ರೂಪಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: 'ಜೈ ಕಿಸಾನ್'ಎಂದು ಹೆಮ್ಮೆ ವ್ಯಕ್ತಪಡಿಸಿದ ಕೃಷಿ ಸಚಿವ ಬಿ.ಸಿ.ಪಾಟೀಲರು ಇದೀಗ 'ನೇಗಿಲ ಹಿಡಿದ ಹೊಲದೊಳು ಹಾಡುತ ಉಳುವ ಯೋಗಿಯ ನೋಡಲ್ಲಿ' ಎನ್ನುವ ರಾಷ್ಟ್ರಕವಿ ಕುವೆಂಪು ವಿರಚಿತ ಪದ್ಯವನ್ನು ಇನ್ನಷ್ಟು ಪ್ರಚುರಪಡಿಸಲು ಮುಂದಾಗಿದ್ದಾರೆ.</p>.<p>ಈ ಹಾಡು ಕರ್ನಾಟಕದಲ್ಲಿ ರೈತಗೀತೆಯೆಂದೇ ಪ್ರಖ್ಯಾತಿ ಹೊಂದಿದ್ದು, ಅನ್ನದಾತನ ಮಹತ್ವವೇನು? ಎನ್ನುವುದನ್ನು ಸಾರಿಸಾರಿ ಹೇಳುತ್ತದೆ. ಅಷ್ಟೇ ಅಲ್ಲ ಕಾರ್ಯಕ್ರಮಗಳಲ್ಲಿ ಈ ಗೀತೆ ಮೊಳಗುತ್ತಿದ್ದಂತೆಯೇ ಎದ್ದುನಿಂತು ಗೌರವವನ್ನೂ ಸೂಚಿಸಲಾಗುತ್ತದೆ.</p>.<p>ಇದೀಗ ಕೃಷಿ ಸಚಿವರು ರೈತರ ಮಹತ್ವವನ್ನು ಸಾರುವ ಈ ಹಾಡನ್ನು ಕೃಷಿ ವಿಶ್ವವಿದ್ಯಾಲಯದ ವಿಜ್ಞಾನಿಗಳು, ಅಧಿಕಾರಿಗಳು,ಸಿಬ್ಬಂದಿ, ಕೃಷಿ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಯೂ ಸೇರಿದಂತೆ ರೈತರು ತಾವು ಬಳಸುವ ಮೊಬೈಲ್ನ ಕಾಲರ್ ಟೋನ್,ರಿಂಗ್ ಟೋನ್ ಆಗಿ ಬಳಸುವಂತೆ ಸೂಚನೆ ನೀಡಿದ್ದಾರೆ.</p>.<p>ಕೆಲವು ದಿನಗಳ ಹಿಂದೆ 'ಹಲೋ'ಬದಲಿಗೆ 'ಜೈ ಕಿಸಾನ್'ಬಳಸುವಂತೆ ಸಚಿವರು ನಿರ್ದೇಶಿಸಿದ್ದರು.ಇದೀಗ ರೈತಗೀತೆಯನ್ನು ಕಾಲರ್ ರಿಂಗ್ ಟೋನಾಗಿ ಬಳಸಲು ಯೋಜನೆ ರೂಪಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>