ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಆದಾಯ ತೆರಿಗೆ ಇಲಾಖೆ ದಾಳಿ ಬಗ್ಗೆ ಎಲ್ಲಿ ಹಣ ಸಿಕ್ಕಿತು, ಎಷ್ಟು ಸಿಕ್ಕಿತು? ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹಗುರವಾಗಿ ಮಾತನಾಡಿದ್ದಾರೆ. ಚುನಾವಣೆಗಾಗಿ ಮುಂಗಡ ಹಣ ಪಡೆದಿರುವುದರಿಂದಲೇ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇವರ ಇನ್ನೂ ಅನೇಕ ಹಗರಣಗಳು ಬಯಲಿಗೆ ಬರಲಿವೆ. ಇದು ಕಮಿಷನ್ ಏಜೆಂಟ್ ಸರ್ಕಾರ. ಇದು 10 ಪರ್ಸೆಂಟ್ ಸರ್ಕಾರ ಅಲ್ಲ; 20 ಪರ್ಸೆಂಟ್ ಸರ್ಕಾರ ಎಂಬುದು ಸಾಬೀತಾಗಿದೆ. ಇದಕ್ಕೆ ಕುಮಾರಸ್ವಾಮಿ ಉತ್ತರ ಕೊಡಬೇಕು’ ಎಂದು ಒತ್ತಾಯಿಸಿದರು.