ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಡಿಯೂರಪ್ಪನವರ ಆತ್ಮಸಾಕ್ಷಿಗೆ ಧನ್ಯವಾದ: ಡಿ.ಕೆ.ಶಿವಕುಮಾರ್‌

Last Updated 10 ಫೆಬ್ರುವರಿ 2019, 7:39 IST
ಅಕ್ಷರ ಗಾತ್ರ

ಬೆಂಗಳೂರು: ‘ಆಪರೇಷನ್‌ ಕಮಲದ ಬಗ್ಗೆ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಬಿಡುಗಡೆ ಮಾಡಿರುವ ಆಡಿಯೊ ಬಗ್ಗೆ ಬಿ.ಎಸ್‌.ಯಡಿಯೂರಪ್ಪ ಅವರು ತಪ್ಪೊಪ್ಪಿಕೊಂಡ ಹಿನ್ನೆಲೆ ಅವರ ಆತ್ಮಸಾಕ್ಷಿಗೆ ಧನ್ಯವಾದ’ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಹೇಳಿದರು.

‘ವಾಸ್ತವಾಂಶವನ್ನು ಮುಚ್ಚಿಹಾಕಲು ಯಾರಿಂದಲೂ ಸಾಧ್ಯವಿಲ್ಲ. ಬೇರೆಯಾವರ ಧ್ವನಿಯನ್ನು ಮಿಮಿಕ್ರಿ ಮಾಡುವುದುಅಷ್ಟು ಸುಲಭವಲ್ಲ’ ಎಂದರು.

‘ಈಗ ರಾಜಕೀಯ ನಿವೃತ್ತಿ ಘೋಷಿಸಲಿ’
‘ಕುಮಾರಸ್ವಾಮಿ ಆರೋಪ ಸಾಬೀತಾದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ, ರಾಜಕೀಯ ನಿವೃತ್ತಿ ಘೋಷಿಸುತ್ತೇನೆ ಎಂದು ಹೇಳಿದ್ದ ಯಡಿಯೂರಪ್ಪನವರು ಇದೀಗ ತಪ್ಪೊಪ್ಪಿಕೊಂಡಿದ್ದು,ಹಿನ್ನೆಲೆ ಕೂಡಲೇ ರಾಜಕೀಯದಿಂದ ನಿವೃತ್ತಿ ಘೋಷಿಸಲಿ ಎಂದು ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ ಆಗ್ರಹಿಸಿದರು.

‘ಇದಕ್ಕಿಂತ ಕೀಳುಮಟ್ಟದ ರಾಜಕಾರಣ ಇನ್ನೊಂದಿಲ್ಲ. ಅವರ ವಿರುದ್ಧ ಕ್ರಮ ಜರುಗಿಸುವಂತೆ ಸದನದಲ್ಲಿ ಆಗ್ರಹಿಸುತ್ತೇನೆ’ ಎಂದು ಹೇಳಿದರು.

ಇವನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT