ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಫೆ.6ಕ್ಕೆ ನೂತನ ಸಚಿವರ ಪ್ರಮಾಣವಚನ: ಎಂಟಿಬಿ, ವಿಶ್ವನಾಥ್‌ಗೆ ಸ್ಥಾನವಿಲ್ಲ 

Last Updated 2 ಫೆಬ್ರುವರಿ 2020, 7:01 IST
ಅಕ್ಷರ ಗಾತ್ರ

ಬೆಂಗಳೂರು: ಇದೇ 6ರಂದು (ಗುರುವಾರ) ಬೆಳಿಗ್ಗೆ 10.30ಕ್ಕೆ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ತಿಳಿಸಿದರು.

ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ವಲಸೆ ಬಂದಿರುವ 10 ಶಾಸಕರು, ಪಕ್ಷದ 3 ಶಾಸಕರು ಸಚಿವ ಸ್ಥಾನ ಪಡೆಯಲಿದ್ದಾರೆ’ ಎಂದು ಹೇಳಿದರು.

ಸುಪ್ರೀಂಕೋರ್ಟ್ ತೀರ್ಪಿನ ಪ್ರಕಾರ ಎಚ್.ವಿಶ್ವನಾಥ್, ಎಂಟಿಬಿ ನಾಗರಾಜ್ ಅವರಿಗೆ ಸಚಿವ ಸ್ಥಾನ ಇಲ್ಲ ಎಂದು ಸ್ಪಷ್ಟಪಡಿಸಿದರು.

ಸದ್ಯಕ್ಕೆ ಆರ್.ಶಂಕರ್ ಅವರನ್ನು ಸಚಿವರನ್ನಾಗಿ ಮಾಡುವುದಿಲ್ಲ. ಮುಂದೆ ವಿಧಾನಪರಿಷತ್ ಸದಸ್ಯರನ್ನಾಗಿ ಮಾಡಿ, ಬಳಿಕ ಸಚಿವ ಸ್ಥಾನ ನೀಡಲಾಗುವುದು ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT