<p><strong>ಮೈಸೂರು</strong>: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಗೆ ಧಮ್ ಇಲ್ಲ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಶುಕ್ರವಾರ ಇಲ್ಲಿ ಹೇಳಿದರು.</p>.<p>ಪೆಟ್ರೋಲ್ ಬೆಲೆ ಏರಿಕೆ ಖಂಡಿಸಿ ಹಮ್ಮಿಕೊಂಡಿದ್ದ ಪ್ರತಿಭಟನೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ಜಿಎಸ್ಟಿ ಹಣ ಕೊಟ್ಟಿಲ್ಲ. 15ನೇ ಹಣಕಾಸು ಆಯೋಗದಡಿ ನೀಡಬೇಕಾದ ಅನುದಾನ ಕೊಟ್ಟಿಲ್ಲ. ರಾಜ್ಯಕ್ಕೆ ಬರಬೇಕಿರುವುದನ್ನು ಕೇಳಲು ಅವನಿಗೆ ಧಮ್ ಇಲ್ಲ ಎಂದರು.</p>.<p>ಬಡವರಿಗೆ ಅನುಕೂಲವಾಗಿರುವ ಇಂದಿರಾ ಕ್ಯಾಂಟೀನ್ ಅನ್ನು ರಾಜಕೀಯ ಕಾರಣಕ್ಕಾಗಿ ನಿಲ್ಲಿಸಲು ಮುಂದಾಗಿರೋದು ಒಳ್ಳೆಯ ಬೆಳವಣಿಗೆಯಲ್ಲ ಎಂದು ಅವರು ಹೇಳಿದರು.</p>.<p>ಮೋದಿ ತಾಳಕ್ಕೆ ಯಡಿಯೂರಪ್ಪ ಒಬ್ಬರೇ ಅಲ್ಲ, ದೇಶದ ಜನರೇ ಕುಣಿಯಲಾರಂಭಿಸಿದ್ದಾರೆ ಎಂದರು.</p>.<p>ಎಪಿಎಂಸಿ, ಕಾರ್ಮಿಕ, ವಿದ್ಯುಚ್ಛಕ್ತಿ ಮಸೂದೆ ಸೇರಿಂತೆ ಭೂ ಸುಧಾರಣೆ ಕಾಯ್ದೆ ಬಗ್ಗೆ ಅಧಿವೇಶನದಲ್ಲಿ ಚರ್ಚಿಸಬೇಕು. ಸುಗ್ರೀವಾಜ್ಞೆ ಮೂಲಕ ಈ ತಿದ್ದುಪಡಿ ಮಸೂದೆ ಜಾರಿಗೊಳಿಸುತ್ತಿರುವುದು ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ಟೀಕಿಸಿದರು.</p>.<p>ಕೋವಿಡ್ ಸಂಕಷ್ಟದ ಕಾಲದಲ್ಲಿ, ಎಲ್ಲೆಡೆ 144 ಕಲಂ ನಿಷೇಧಾಜ್ಞೆ ಇರುವಾಗ ಪ್ರತಿಭಟಿಸುವ ಹಕ್ಕನ್ನು ಮೊಟಕುಗೊಳಿಸಿ ಸುಗ್ರೀವಾಜ್ಞೆ ಹೊರಡಿಸುತ್ತಿದ್ದಾರೆ. ರಾಜಕೀಯವಾಗಿ ಇದರ ವಿರುದ್ಧ ಹೋರಾಟ ಮಾಡುತ್ತೇವೆ. ಜೈಲ್ ಭರೋಗೂ ಸಿದ್ಧರಿದ್ದೇವೆ ಎಂದು ಸಿದ್ದರಾಮಯ್ಯ ಗುಡುಗಿದರು.</p>.<p>ಕೇಂದ್ರದ ಬಳಿ ಹಣವೇ ಇಲ್ಲ. ಅರ್ಥ ವ್ಯವಸ್ಥೆ ಹಾಳಾಗಿದೆ. 62% ಉದ್ಯೋಗ ನಷ್ಟವಾಗಿದೆ. ಕೋಟಿ ಕೋಟಿ ವಲಸೆ ಕಾರ್ಮಿಕರ ಬದುಕು ಅತಂತ್ರವಾಗಿದೆ.</p>.<p>ಬಡವರು, ರೈತರ ಬಳಿ ಕೊಳ್ಳುವ ಶಕ್ತಿ ಇಲ್ಲದಂತಹ ಸಂದರ್ಭದಲ್ಲಿ ಲೀಟರ್ ಪೆಟ್ರೋಲ್ ಗೆ ₹ 5 ಹೆಚ್ಚಾಗಿದೆ. ಇದು ಬಡವರ ಬದುಕನ್ನು ಮತ್ತಷ್ಟು ಭಾರವನ್ನಾಗಿಸಿದೆ ಎಂದು ಕೇಂದ್ರದ ವಿರುದ್ಧ ಹರಿಹಾಯ್ದರು.</p>.<p>2015ನೇ ಸಾಲಿನ ಕೆಪಿಎಸ್ ಸಿ ಪರೀಕ್ಷೆ ಬರೆದ ಅಭ್ಯರ್ಥಿಗಳಿಗೆ ನೆಪ ಹೇಳದೆ ಉತ್ತರ ಪತ್ರಿಕೆ ನೀಡಬೇಕು ಎಂದು ಸಿದ್ದರಾಮಯ್ಯ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.</p>.<p><strong>ನಂಜು ರೋಗ: </strong>ವಿಶ್ವನಾಥ್ ಗೆ ನಂಜು ರೋಗವಿದೆ. ಹತಾಶೆಯಿಂದ ಬಾಯಿಗೆ ಬಂದಂತೆ ಮಾತನಾಡುತ್ತಾರೆ ಎಂದು ಪ್ರಶ್ನೆಯೊಂದಕ್ಕೆ ಸಿದ್ದರಾಮಯ್ಯ ಪ್ರತಿಕ್ರಿಯಿಸಿದರು.</p>.<p>ಬುದ್ದಿ ಇದೆಯಾ..? ನಾನೇನು ಬಿಜೆಪಿ ಹೈಕಮಾಂಡಾ.. ಟಿಕೆಟ್ ತಪ್ಪಿಸಲು. ನಾನು ಕಾಂಗ್ರೆಸ್ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಗೆ ಧಮ್ ಇಲ್ಲ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಶುಕ್ರವಾರ ಇಲ್ಲಿ ಹೇಳಿದರು.</p>.<p>ಪೆಟ್ರೋಲ್ ಬೆಲೆ ಏರಿಕೆ ಖಂಡಿಸಿ ಹಮ್ಮಿಕೊಂಡಿದ್ದ ಪ್ರತಿಭಟನೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ಜಿಎಸ್ಟಿ ಹಣ ಕೊಟ್ಟಿಲ್ಲ. 15ನೇ ಹಣಕಾಸು ಆಯೋಗದಡಿ ನೀಡಬೇಕಾದ ಅನುದಾನ ಕೊಟ್ಟಿಲ್ಲ. ರಾಜ್ಯಕ್ಕೆ ಬರಬೇಕಿರುವುದನ್ನು ಕೇಳಲು ಅವನಿಗೆ ಧಮ್ ಇಲ್ಲ ಎಂದರು.</p>.<p>ಬಡವರಿಗೆ ಅನುಕೂಲವಾಗಿರುವ ಇಂದಿರಾ ಕ್ಯಾಂಟೀನ್ ಅನ್ನು ರಾಜಕೀಯ ಕಾರಣಕ್ಕಾಗಿ ನಿಲ್ಲಿಸಲು ಮುಂದಾಗಿರೋದು ಒಳ್ಳೆಯ ಬೆಳವಣಿಗೆಯಲ್ಲ ಎಂದು ಅವರು ಹೇಳಿದರು.</p>.<p>ಮೋದಿ ತಾಳಕ್ಕೆ ಯಡಿಯೂರಪ್ಪ ಒಬ್ಬರೇ ಅಲ್ಲ, ದೇಶದ ಜನರೇ ಕುಣಿಯಲಾರಂಭಿಸಿದ್ದಾರೆ ಎಂದರು.</p>.<p>ಎಪಿಎಂಸಿ, ಕಾರ್ಮಿಕ, ವಿದ್ಯುಚ್ಛಕ್ತಿ ಮಸೂದೆ ಸೇರಿಂತೆ ಭೂ ಸುಧಾರಣೆ ಕಾಯ್ದೆ ಬಗ್ಗೆ ಅಧಿವೇಶನದಲ್ಲಿ ಚರ್ಚಿಸಬೇಕು. ಸುಗ್ರೀವಾಜ್ಞೆ ಮೂಲಕ ಈ ತಿದ್ದುಪಡಿ ಮಸೂದೆ ಜಾರಿಗೊಳಿಸುತ್ತಿರುವುದು ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ಟೀಕಿಸಿದರು.</p>.<p>ಕೋವಿಡ್ ಸಂಕಷ್ಟದ ಕಾಲದಲ್ಲಿ, ಎಲ್ಲೆಡೆ 144 ಕಲಂ ನಿಷೇಧಾಜ್ಞೆ ಇರುವಾಗ ಪ್ರತಿಭಟಿಸುವ ಹಕ್ಕನ್ನು ಮೊಟಕುಗೊಳಿಸಿ ಸುಗ್ರೀವಾಜ್ಞೆ ಹೊರಡಿಸುತ್ತಿದ್ದಾರೆ. ರಾಜಕೀಯವಾಗಿ ಇದರ ವಿರುದ್ಧ ಹೋರಾಟ ಮಾಡುತ್ತೇವೆ. ಜೈಲ್ ಭರೋಗೂ ಸಿದ್ಧರಿದ್ದೇವೆ ಎಂದು ಸಿದ್ದರಾಮಯ್ಯ ಗುಡುಗಿದರು.</p>.<p>ಕೇಂದ್ರದ ಬಳಿ ಹಣವೇ ಇಲ್ಲ. ಅರ್ಥ ವ್ಯವಸ್ಥೆ ಹಾಳಾಗಿದೆ. 62% ಉದ್ಯೋಗ ನಷ್ಟವಾಗಿದೆ. ಕೋಟಿ ಕೋಟಿ ವಲಸೆ ಕಾರ್ಮಿಕರ ಬದುಕು ಅತಂತ್ರವಾಗಿದೆ.</p>.<p>ಬಡವರು, ರೈತರ ಬಳಿ ಕೊಳ್ಳುವ ಶಕ್ತಿ ಇಲ್ಲದಂತಹ ಸಂದರ್ಭದಲ್ಲಿ ಲೀಟರ್ ಪೆಟ್ರೋಲ್ ಗೆ ₹ 5 ಹೆಚ್ಚಾಗಿದೆ. ಇದು ಬಡವರ ಬದುಕನ್ನು ಮತ್ತಷ್ಟು ಭಾರವನ್ನಾಗಿಸಿದೆ ಎಂದು ಕೇಂದ್ರದ ವಿರುದ್ಧ ಹರಿಹಾಯ್ದರು.</p>.<p>2015ನೇ ಸಾಲಿನ ಕೆಪಿಎಸ್ ಸಿ ಪರೀಕ್ಷೆ ಬರೆದ ಅಭ್ಯರ್ಥಿಗಳಿಗೆ ನೆಪ ಹೇಳದೆ ಉತ್ತರ ಪತ್ರಿಕೆ ನೀಡಬೇಕು ಎಂದು ಸಿದ್ದರಾಮಯ್ಯ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.</p>.<p><strong>ನಂಜು ರೋಗ: </strong>ವಿಶ್ವನಾಥ್ ಗೆ ನಂಜು ರೋಗವಿದೆ. ಹತಾಶೆಯಿಂದ ಬಾಯಿಗೆ ಬಂದಂತೆ ಮಾತನಾಡುತ್ತಾರೆ ಎಂದು ಪ್ರಶ್ನೆಯೊಂದಕ್ಕೆ ಸಿದ್ದರಾಮಯ್ಯ ಪ್ರತಿಕ್ರಿಯಿಸಿದರು.</p>.<p>ಬುದ್ದಿ ಇದೆಯಾ..? ನಾನೇನು ಬಿಜೆಪಿ ಹೈಕಮಾಂಡಾ.. ಟಿಕೆಟ್ ತಪ್ಪಿಸಲು. ನಾನು ಕಾಂಗ್ರೆಸ್ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>