ಬೆಂಗಳೂರು: ಸಿಎಂ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಸದ್ಯಕ್ಕೆ ನನೆಗುದಿಗೆ ಬಿದ್ದಿದ್ದರೂ ಡಿಸಿಎಂ ಪಟ್ಟ,ಸಚಿವ ಸ್ಥಾನಕ್ಕೆ ಪೈಪೋಟಿ, ಲಾಬಿ ನಡೆಯುತ್ತಲೇ ಇದೆ.
ಉಪಮುಖ್ಯಮಂತ್ರಿ ಸ್ಥಾನ ಸಿಗುವುದು ಅನುಮಾನ ಎಂಬ ಕಾರಣಕ್ಕೆ ಸರ್ಕಾರಿ ಚಟುವಟಿಕೆಯಿಂದ ಅಂತರ ಕಾಯ್ದುಕೊಂಡು ಮುನಿಸು ತೋರಿದ್ದ ಸಚಿವ ಬಿ. ಶ್ರೀರಾಮುಲು, ‘ಹುದ್ದೆ ಕೊಟ್ಟರೆ ನಿಭಾಯಿಸಲು ಸಿದ್ಧ’ ಎಂದು ತಿಳಿಸಿದ್ದಾರೆ.
ಇದೇ ವೇಳೆ ಶಾಸಕ ಬಸನಗೌಡ ಪಾಟೀಲ ಯತ್ನಾಳ, ‘ಶ್ರೀರಾಮುಲುಗಿಂತ ನಾನು ಹಿರಿಯ. ಇದನ್ನು ಗಮನಿಸಿ ಮೊದಲ ಬಾರಿ ಸಂಪುಟ ವಿಸ್ತರಣೆ ವೇಳೆಯೇ ಸಚಿವ ಸ್ಥಾನ ನೀಡಬೇಕಿತ್ತು’ ಎಂದು ಪ್ರತಿಪಾದಿಸಿದ್ದಾರೆ.