<p><strong>ರಾಮನಗರ: </strong>ರಾಜ್ಯದಲ್ಲಿ ಈವರೆಗೆ 75 ಮಂದಿಯಲ್ಲಿ ಕೋವಿಡ್-19 ಸೋಂಕು ಪತ್ತೆಯಾಗಿದೆ ಎಂದು ಆರೋಗ್ಯ ಸಚಿವ ಬಿ. ಶ್ರೀರಾಮುಲು ತಿಳಿಸಿದರು.</p>.<p>ರಾಮನಗರದಲ್ಲಿ ಶನಿವಾರ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಮಾತನಾಡಿದ ಅವರು, ‘ಸರ್ಕಾರದಿಂದ ಈಗಾಗಲೇ ವೆಂಟಿಲೇಟರ್ಗಳ ಖರೀದಿ ನಡೆದಿದೆ. ವಿದೇಶಗಳಿಂದ ಮಾಸ್ಕ್, ಇತರೆ ಮೆಡಿಕಲ್ ಸಾಮಗ್ರಿಗಳನ್ನು ತರಿಸುವ ಪ್ರಯತ್ನ ನಡೆದಿದೆ. ಪ್ರತಿ ಜಿಲ್ಲೆಯಲ್ಲೂ ಕೋವಿಡ್-19 ವಿಶೇಷ ಆಸ್ಪತ್ರೆಗಳನ್ನು ತೆರೆಯಲಾಗುತ್ತಿದೆ’ ಎಂದರು.</p>.<p><strong>ಇದನ್ನೂ ಓದಿ:</strong><a href="https://www.prajavani.net/stories/stateregional/passenger-please-check-up-who-are-these-government-buses-715641.html" target="_blank">ಪ್ರಯಾಣಿಕರ ಗಮನಕ್ಕೆ: ಈ ಸರ್ಕಾರಿ ಬಸ್ಸುಗಳಲ್ಲಿ ಪ್ರಯಾಣಿಸಿದ್ದವರು ತಪಾಸಣೆ ಮಾಡಿಸಿ</a></p>.<p>ಪೊಲೀಸರು ಜನರಿಗೆ ಲಾಠಿಯಲ್ಲಿ ಹೊಡೆಯುವುದು, ಜನರು ಪೊಲೀಸರ ಮೇಲೆಯೇ ಹಲ್ಲೆ ಮಾಡುವ ಘಟನೆಗಳು ನಡೆಯಬಾರದು. ಆರೋಗ್ಯದ ಹಿತದೃಷ್ಟಿಯಿಂದ ಜನರು ಮನೆ ಬಿಟ್ಟು ಹೊರ ಬರಬಾರದು ಎಂದು ಅವರು ಸಲಹೆ ನೀಡಿದರು.<br /><br />ಸಂಸದ ಡಿ.ಕೆ. ಸುರೇಶ್ ಮಾತನಾಡಿ, ಹೋಮ್ ಕ್ವಾರಂಟೈನ್ ಅವಧಿಯನ್ನು 14ರಿಂದ 28 ದಿನಗಳಿಗೆ ಹೆಚ್ಚಿಸುವಂತೆ ಆಗ್ರಹಿಸಿದರು.</p>.<p><strong>ಸಚಿವರ ಸಭೆಯಲ್ಲೇ ಸಾಮಾಜಿಕ ಅಂತರಕ್ಕೆ ತಿಲಾಂಜಲಿ</strong></p>.<p>ಶ್ರೀರಾಮಲು ಅವರು ಜಿಲ್ಲಾಧಿಕಾರಿ ಸಭಾಂಗಣದಲ್ಲಿ ನಡೆಸಿದ ಅಧಿಕಾರಿಗಳ ಸಭೆಯಲ್ಲಿ ಸಾಮಾಜಿಕ ಅಂತರ (ಸೋಷಿಯಲ್ ಡಿಸ್ಟೆನ್ಸಿಂಗ್)ನಿಯಮ ಪಾಲನೆಯಾಗಲಿಲ್ಲ.</p>.<p>ಸಚಿವರ ಪಕ್ಕ ಕೆಲವೇ ಅಡಿಗಳ ಅಂತರದಲ್ಲಿ ಸಂಸದ ಡಿ.ಕೆ. ಸುರೇಶ್, ಅಧಿಕಾರಿಗಳು ಕುಳಿತಿದ್ದರು. ಹಿಂದೆಯೇ ಅವರ ಆಪ್ತ ಸಹಾಯಕರು ಇದ್ದರು. ಕೆಲವರು ಮಾಸ್ಕ್ ಸಹ ಧರಿಸಿರಲಿಲ್ಲ. ಸಚಿವರು ಕೋವಿಡ್-19 ವಿಶೇಷ ಆಸ್ಪತ್ರೆಗೆ ಭೇಟಿ ನೀಡಿದ ಸಂದರ್ಭವೂ ಅವರ ಹಿಂದೆ ಅಧಿಕಾರಿಗಳು, ಆಪ್ತ ಸಹಾಯಕರು ಹಿಂಡುಹಿಂಡಾಗಿ ಓಡಾಡಿದರು.</p>.<p><strong>ಇದನ್ನೂ ಓದಿ:</strong><a href="https://www.prajavani.net/stories/stateregional/covid-19-cases-confirmed-in-chikkaballapura-715624.html" itemprop="url" target="_blank">ಚಿಕ್ಕಬಳ್ಳಾಪುರದಲ್ಲಿ ಮತ್ತೆ 5 ಜನರಲ್ಲಿ ಕೋವಿಡ್-19 ದೃಢ, ಬಾಧಿತರ ಸಂಖ್ಯೆ 9ಕ್ಕೆ</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮನಗರ: </strong>ರಾಜ್ಯದಲ್ಲಿ ಈವರೆಗೆ 75 ಮಂದಿಯಲ್ಲಿ ಕೋವಿಡ್-19 ಸೋಂಕು ಪತ್ತೆಯಾಗಿದೆ ಎಂದು ಆರೋಗ್ಯ ಸಚಿವ ಬಿ. ಶ್ರೀರಾಮುಲು ತಿಳಿಸಿದರು.</p>.<p>ರಾಮನಗರದಲ್ಲಿ ಶನಿವಾರ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಮಾತನಾಡಿದ ಅವರು, ‘ಸರ್ಕಾರದಿಂದ ಈಗಾಗಲೇ ವೆಂಟಿಲೇಟರ್ಗಳ ಖರೀದಿ ನಡೆದಿದೆ. ವಿದೇಶಗಳಿಂದ ಮಾಸ್ಕ್, ಇತರೆ ಮೆಡಿಕಲ್ ಸಾಮಗ್ರಿಗಳನ್ನು ತರಿಸುವ ಪ್ರಯತ್ನ ನಡೆದಿದೆ. ಪ್ರತಿ ಜಿಲ್ಲೆಯಲ್ಲೂ ಕೋವಿಡ್-19 ವಿಶೇಷ ಆಸ್ಪತ್ರೆಗಳನ್ನು ತೆರೆಯಲಾಗುತ್ತಿದೆ’ ಎಂದರು.</p>.<p><strong>ಇದನ್ನೂ ಓದಿ:</strong><a href="https://www.prajavani.net/stories/stateregional/passenger-please-check-up-who-are-these-government-buses-715641.html" target="_blank">ಪ್ರಯಾಣಿಕರ ಗಮನಕ್ಕೆ: ಈ ಸರ್ಕಾರಿ ಬಸ್ಸುಗಳಲ್ಲಿ ಪ್ರಯಾಣಿಸಿದ್ದವರು ತಪಾಸಣೆ ಮಾಡಿಸಿ</a></p>.<p>ಪೊಲೀಸರು ಜನರಿಗೆ ಲಾಠಿಯಲ್ಲಿ ಹೊಡೆಯುವುದು, ಜನರು ಪೊಲೀಸರ ಮೇಲೆಯೇ ಹಲ್ಲೆ ಮಾಡುವ ಘಟನೆಗಳು ನಡೆಯಬಾರದು. ಆರೋಗ್ಯದ ಹಿತದೃಷ್ಟಿಯಿಂದ ಜನರು ಮನೆ ಬಿಟ್ಟು ಹೊರ ಬರಬಾರದು ಎಂದು ಅವರು ಸಲಹೆ ನೀಡಿದರು.<br /><br />ಸಂಸದ ಡಿ.ಕೆ. ಸುರೇಶ್ ಮಾತನಾಡಿ, ಹೋಮ್ ಕ್ವಾರಂಟೈನ್ ಅವಧಿಯನ್ನು 14ರಿಂದ 28 ದಿನಗಳಿಗೆ ಹೆಚ್ಚಿಸುವಂತೆ ಆಗ್ರಹಿಸಿದರು.</p>.<p><strong>ಸಚಿವರ ಸಭೆಯಲ್ಲೇ ಸಾಮಾಜಿಕ ಅಂತರಕ್ಕೆ ತಿಲಾಂಜಲಿ</strong></p>.<p>ಶ್ರೀರಾಮಲು ಅವರು ಜಿಲ್ಲಾಧಿಕಾರಿ ಸಭಾಂಗಣದಲ್ಲಿ ನಡೆಸಿದ ಅಧಿಕಾರಿಗಳ ಸಭೆಯಲ್ಲಿ ಸಾಮಾಜಿಕ ಅಂತರ (ಸೋಷಿಯಲ್ ಡಿಸ್ಟೆನ್ಸಿಂಗ್)ನಿಯಮ ಪಾಲನೆಯಾಗಲಿಲ್ಲ.</p>.<p>ಸಚಿವರ ಪಕ್ಕ ಕೆಲವೇ ಅಡಿಗಳ ಅಂತರದಲ್ಲಿ ಸಂಸದ ಡಿ.ಕೆ. ಸುರೇಶ್, ಅಧಿಕಾರಿಗಳು ಕುಳಿತಿದ್ದರು. ಹಿಂದೆಯೇ ಅವರ ಆಪ್ತ ಸಹಾಯಕರು ಇದ್ದರು. ಕೆಲವರು ಮಾಸ್ಕ್ ಸಹ ಧರಿಸಿರಲಿಲ್ಲ. ಸಚಿವರು ಕೋವಿಡ್-19 ವಿಶೇಷ ಆಸ್ಪತ್ರೆಗೆ ಭೇಟಿ ನೀಡಿದ ಸಂದರ್ಭವೂ ಅವರ ಹಿಂದೆ ಅಧಿಕಾರಿಗಳು, ಆಪ್ತ ಸಹಾಯಕರು ಹಿಂಡುಹಿಂಡಾಗಿ ಓಡಾಡಿದರು.</p>.<p><strong>ಇದನ್ನೂ ಓದಿ:</strong><a href="https://www.prajavani.net/stories/stateregional/covid-19-cases-confirmed-in-chikkaballapura-715624.html" itemprop="url" target="_blank">ಚಿಕ್ಕಬಳ್ಳಾಪುರದಲ್ಲಿ ಮತ್ತೆ 5 ಜನರಲ್ಲಿ ಕೋವಿಡ್-19 ದೃಢ, ಬಾಧಿತರ ಸಂಖ್ಯೆ 9ಕ್ಕೆ</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>