ಪ್ರಸ್ತುತ ರಾಜ್ಯದಲ್ಲಿ 46768 ಅಡುಗೆಯವರು ಮತ್ತು 71159 ಸಹಾಯಕರು ಸೇರಿ ಒಟ್ಟು 1,17,927 ಮಂದಿ ಮಧ್ಯಾಹ್ನ ಉಪಹಾರ ಯೋಜನೆಯಡಿ ಕೆಲಸ ನಿರ್ವಹಿಸುತ್ತಿದ್ದಾರೆ. ಪ್ರಸ್ತುತ ಸರ್ಕಾರ ನೀಡುವ ಸಂಭಾವನೆಯಲ್ಲಿ ಜೀವನ ಸಾಗಿಸುವುದಕ್ಕೆ ತೊಂದರೆಯಾಗುತ್ತಿರುವುದರಿಂದ ತಮ್ಮ ವೇತನವನ್ನು ಕ್ರಮವಾಗಿ 6000 ಮತ್ತು 5000ಕ್ಕೆ ಹೆಚ್ಚಿಸಬೇಕೆಂದು ಈ ಕೆಲಸಗಾರರು ಹಲವಾರು ಬಾರಿ ಕೆಲಸ ಸ್ಥಗಿತ ಮುಷ್ಕರ ಮಾಡುವ ಮೂಲಕ ಒತ್ತಾಯಿಸುತ್ತಿದ್ದಾರೆ.