ಬಳ್ಳಾರಿ ಜಿಲ್ಲೆ ಸಂಡೂರು ತಾಲ್ಲೂಕಿನ ಗೊಲ್ಲ ನಿಂಗೇನಹಳ್ಳಿ ಗ್ರಾಮದ ರತ್ನಮ್ಮ ಅವರಿಗೆ ಬುಧ ವಾರ ಬೆಳಗಿನ ಜಾವ ಹೆರಿಗೆ ನೋವು ಕಾಣಿಸಿಕೊಂಡಿತ್ತು. ಮನೆಯವರು ಆಂಬುಲೆನ್ಸ್ಗಾಗಿ ರಾಂಪುರ ಹಾಗೂ ಚೋರನೂರು ಆಸ್ಪತ್ರೆಯ ಸಿಬ್ಬಂದಿಗೆ ಕರೆ ಮಾಡಿದ್ದರು. ಆದರೆ ಅಂಬುಲೆನ್ಸ್ ಬರುವುದರೊಳಗೆಸಂಡೂರು-ರಾಂಪುರ ನಡುವೆ ಸಂಚರಿಸುವ ಸಾರಿಗೆ ಬಸ್ಸಿನಲ್ಲಿ ರಾಂಪುರ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಬರುತ್ತಿರುವಾಗಬಸ್ಸಿನಲ್ಲೇ ಹೆರಿಗೆಯಾಗಿದೆ.