‘ಬಡವರ ಬಂಧು’ ಯೋಜನೆ ಜಾರಿಗೆ ಸಿದ್ಧತೆ

ಬೆಂಗಳೂರು: ಸಣ್ಣ ವ್ಯಾಪಾರಿಗಳು ಮತ್ತು ಬೀದಿಬದಿ ವ್ಯಾಪಾರಿಗಳಿಗೆ ನೆರವಾಗಲು ರಾಜ್ಯ ಸರ್ಕಾರ ‘ಬಡವರ ಬಂಧು’ ಯೋಜನೆ ಜಾರಿಗೊಳಿಸಲು ಮುಂದಾಗಿದೆ. ಈ ಸಂಬಂಧ ಸಹಕಾರ ಸಚಿವ ಬಂಡೆಪ್ಪ ಕಾಶೆಂಪೂರ ಅವರು ಯಶವಂತಪುರದ ಹಣ್ಣು ಮತ್ತು ತರಕಾರಿ ಮಾರುಕಟ್ಟೆಗೆ ಮಂಗಳವಾರ ಬೆಳಿಗ್ಗೆ ಭೇಟಿ ನೀಡಿ ವ್ಯಾಪಾರಿಗಳೊಂದಿಗೆ ಚರ್ಚಿಸಿದರು.
ಪ್ರಸಕ್ತ ಲೇವಾದೇವಿದಾರರಿಂದ ಬೆಳಿಗ್ಗೆ ಹಣ ಪಡೆದು ಸಂಜೆ ಪಾವತಿಸುತ್ತಿರುವ ಸಣ್ಣ ವ್ಯಾಪಾರಸ್ಥರು, ಬೀದಿಬದಿ ವ್ಯಾಪಾರಿಗಳಿಗೆ ಸರ್ಕಾರದಿಂದಲೇ ನಿತ್ಯ ದುಡಿಮೆ ಬಂಡವಾಳ ಒದಗಿಸುವ ಮಹತ್ವಾಕಾಂಕ್ಷಿ ಯೋಜನೆ ಇದಾಗಿದೆ. ಮೀಟರ್ ಬಡ್ಡಿ ದಂಧೆಗೆ ಸಿಲುಕಿ ಸಂತ್ರಸ್ತರಾಗಿರುವ ಕೆಳವರ್ಗದ ಜನರಿಗೆ ರಕ್ಷಣೆ ನೀಡುವುದು ಈ ಯೋಜನೆಯ ಉದ್ದೇಶ.
‘ಬಡವರ ಬಂಧು ಯೋಜನೆ ಜಾರಿಗೆ ಸಿದ್ಧತೆ ನಡೆಸಿದ್ದೇವೆ. ಈಗಾಗಲೇ ಯೋಜನೆಗೆ ರೂಪುರೇಷೆಗಳನ್ನು ಸಿದ್ಧಪಡಿಸಲಾಗುತ್ತಿದೆ. ಬೀದಿಬದಿಯ ವ್ಯಾಪಾರಿಗಳ ಸಮಸ್ಯೆಗಳನ್ನು ತಿಳಿಯಲು ಈ ಸಂವಾದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಬಡವರಿಗೆ ಅನುಕೂಲವಾಗುವಂತೆ ಯೋಜನೆ ರೂಪಿಸುತ್ತಿದ್ದೇವೆ’ ಎಂದು ಕಾಶೆಂಪೂರ ತಿಳಿಸಿದರು.
‘ಖಾಸಗಿಯವರು ವ್ಯಾಪಾರಿಗಳಿಂದ ಹೆಚ್ಚಿನ ಬಡ್ಡಿ ವಸೂಲಿ ಮಾಡುವುದಕ್ಕೆ ಈ ಮೂಲಕ ಕಡಿವಾಣ ಹಾಕುವ ಉದ್ದೇಶ ಸರ್ಕಾರಕ್ಕಿದೆ’ ಎಂದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.