ಪ್ರವಾಹ ಸಂತ್ರಸ್ತರಿಗೆ ಪರಿಹಾರ ಕ್ರಮಗಳ ಪರಿಶೀಲಿಸಲು ಯಡಿಯೂರಪ್ಪ ಬೆಳಗಾವಿ ಜಿಲ್ಲೆ ಮೂಲಕ ಬಾಗಲಕೋಟೆ ಜಿಲ್ಲೆ ಮುಧೋಳ ತಾಲ್ಲೂಕಿನ ಮಹಾಲಿಂಗಪುರಕ್ಕೆ ಬರಲಿದ್ದಾರೆ. ಅವರನ್ನು ಜಿಲ್ಲೆಗೆ ಕರೆತರಲು ಎಸ್ಕಾರ್ಟ್ ವಾಹನ ತೆರಳಿತ್ತು. ಅಲ್ಲಿ ಸಿಎಂ ಬರುವ ಮುನ್ನ ತಾಲೀಮು ನಡೆಸಲು ಮುಂದಾಗಿದ್ದು, ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಹೊಲಕ್ಕೆ ನುಗ್ಗಿ ಅಲ್ಲಿ ಉರುಳಿ ಬಿದ್ದು ಅಪಘಾತ ಸಂಭವಿಸಿದೆ. ನಂತರ ಬೇರೊಂದು ವಾಹನ ಕಳುಹಿಸಿಕೊಡಲಾಯಿತು.