<p><strong>ಬಾಗಲಕೋಟೆ:</strong> ಪತಿಯ ಕೊಲೆ ಪ್ರಕರಣದಲ್ಲಿ ನ್ಯಾಯ ಸಿಗದೇ ನೊಂದುಕೊಂಡು ಮಹಿಳೆಯೊಬ್ಬರು ರಬಕವಿ–ಬನಹಟ್ಟಿ ತಾಲ್ಲೂಕಿನ ಬಂಡಿಗಣಿ ಅರಣ್ಯಪ್ರದೇಶದಲ್ಲಿ ಶನಿವಾರ ಮೂವರು ಮಕ್ಕಳೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಈ ವೇಳೆ ಮಕ್ಕಳು ಸಾವಿಗೀಡಾಗಿದ್ದು, ತಾಯಿಯ ಸ್ಥಿತಿ ಗಂಭೀರವಾಗಿದೆ.</p>.<p>ಬಂಡಿಗಣಿ ಗ್ರಾಮದ ಭಾಗ್ಯಶ್ರೀ ಮಠದ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ. 12 ವರ್ಷದ ಶಿವಾನಿ, 10 ವರ್ಷದ ಶಿವಶಂಕರ ಹಾಗೂ 9 ವರ್ಷದ ಶಿವಸ್ತೀ ಮೃತಪಟ್ಟ ಮಕ್ಕಳು. ಬಂಡಿಗಣಿ ಸಮೀಪದ ಅರಣ್ಯಪ್ರದೇಶದಲ್ಲಿ ದೇವರ ದರ್ಶನಕ್ಕೆಂದು ಮಕ್ಕಳನ್ನು ಕರೆದೊಯ್ದಿದ್ದ ಭಾಗ್ಯಶ್ರೀ, ಕುಡಿಯುವ ನೀರಿನಲ್ಲಿ ವಿಷ ಬೆರೆಸಿ ಮಕ್ಕಳಿಗೆ ಕುಡಿಸಿದ್ದಾರೆ. ನಂತರ ತಾವು ಕುಡಿದಿದ್ದಾರೆ. ಅವರ ಆರೋಗ್ಯಸ್ಥಿತಿ ಗಂಭೀರವಾಗಿದೆ. ಮಹಾಲಿಂಗಪುರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ.</p>.<p>ಭಾಗ್ಯಶ್ರೀ ಅವರ ಪತಿ ಚಿಕ್ಕಯ್ಯ ಮಠದ ಅವರನ್ನು ಎರಡು ವರ್ಷಗಳ ಹಿಂದೆ ವಾಹನದಿಂದ ಹೊರಗೆಳೆದು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿತ್ತು. ಪ್ರಕರಣದಲ್ಲಿ ಚಿಕ್ಕಯ್ಯನ ತಂದೆ, ಬಂಡಿಗಣಿ ಮಠದ ಚಕ್ರವರ್ತಿ ದಾನೇಶ್ವರ ಸ್ವಾಮಿಯ ಹೆಸರು ಕೇಳಿಬಂದಿತ್ತು. ನಂತರ ಅವರು ಬಂಧನ ಭೀತಿಯಿಂದ ನಿರೀಕ್ಷಣಾ ಜಾಮೀನು ಪಡೆದಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ:</strong> ಪತಿಯ ಕೊಲೆ ಪ್ರಕರಣದಲ್ಲಿ ನ್ಯಾಯ ಸಿಗದೇ ನೊಂದುಕೊಂಡು ಮಹಿಳೆಯೊಬ್ಬರು ರಬಕವಿ–ಬನಹಟ್ಟಿ ತಾಲ್ಲೂಕಿನ ಬಂಡಿಗಣಿ ಅರಣ್ಯಪ್ರದೇಶದಲ್ಲಿ ಶನಿವಾರ ಮೂವರು ಮಕ್ಕಳೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಈ ವೇಳೆ ಮಕ್ಕಳು ಸಾವಿಗೀಡಾಗಿದ್ದು, ತಾಯಿಯ ಸ್ಥಿತಿ ಗಂಭೀರವಾಗಿದೆ.</p>.<p>ಬಂಡಿಗಣಿ ಗ್ರಾಮದ ಭಾಗ್ಯಶ್ರೀ ಮಠದ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ. 12 ವರ್ಷದ ಶಿವಾನಿ, 10 ವರ್ಷದ ಶಿವಶಂಕರ ಹಾಗೂ 9 ವರ್ಷದ ಶಿವಸ್ತೀ ಮೃತಪಟ್ಟ ಮಕ್ಕಳು. ಬಂಡಿಗಣಿ ಸಮೀಪದ ಅರಣ್ಯಪ್ರದೇಶದಲ್ಲಿ ದೇವರ ದರ್ಶನಕ್ಕೆಂದು ಮಕ್ಕಳನ್ನು ಕರೆದೊಯ್ದಿದ್ದ ಭಾಗ್ಯಶ್ರೀ, ಕುಡಿಯುವ ನೀರಿನಲ್ಲಿ ವಿಷ ಬೆರೆಸಿ ಮಕ್ಕಳಿಗೆ ಕುಡಿಸಿದ್ದಾರೆ. ನಂತರ ತಾವು ಕುಡಿದಿದ್ದಾರೆ. ಅವರ ಆರೋಗ್ಯಸ್ಥಿತಿ ಗಂಭೀರವಾಗಿದೆ. ಮಹಾಲಿಂಗಪುರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ.</p>.<p>ಭಾಗ್ಯಶ್ರೀ ಅವರ ಪತಿ ಚಿಕ್ಕಯ್ಯ ಮಠದ ಅವರನ್ನು ಎರಡು ವರ್ಷಗಳ ಹಿಂದೆ ವಾಹನದಿಂದ ಹೊರಗೆಳೆದು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿತ್ತು. ಪ್ರಕರಣದಲ್ಲಿ ಚಿಕ್ಕಯ್ಯನ ತಂದೆ, ಬಂಡಿಗಣಿ ಮಠದ ಚಕ್ರವರ್ತಿ ದಾನೇಶ್ವರ ಸ್ವಾಮಿಯ ಹೆಸರು ಕೇಳಿಬಂದಿತ್ತು. ನಂತರ ಅವರು ಬಂಧನ ಭೀತಿಯಿಂದ ನಿರೀಕ್ಷಣಾ ಜಾಮೀನು ಪಡೆದಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>