‘ತುಂಗಭದ್ರಾ ಜಲಾಶಯದಲ್ಲಿ ಹೂಳು ತುಂಬಿರುವುದರಿಂದ 33 ಟಿಎಂಸಿ ಅಡಿಯಷ್ಟು ನೀರು ಸಂಗ್ರಹಿಸಲು ಸಾಧ್ಯವಾಗುತ್ತಿಲ್ಲ. ಜಲಾಶಯದ ಹೂಳು ತೆಗೆಯಲು ಸಾಧ್ಯವೇ ಇಲ್ಲ ಎಂದು ತಜ್ಞರು ಸ್ಪಷ್ಟವಾಗಿ ಹೇಳಿರುವುದರಿಂದ ನಮಗೆ ಬೇರೆ ಮಾರ್ಗವಿಲ್ಲ. ನಮ್ಮ ಪಾಲಿನ ನೀರನ್ನು ಬಳಸಿಕೊಳ್ಳಲು ಸಮತೋಲನಾ ಜಲಾಶಯ ನಿರ್ಮಿಸುವುದು ಅನಿವಾರ್ಯ. ನಮ್ಮ ಪ್ರಸ್ತಾವನೆಗೆ ಆಂಧ್ರಪ್ರದೇಶ ತಕರಾರು ಎತ್ತಿಲ್ಲ. ಏನೇ ಸಮಸ್ಯೆ ಬಂದರೂ ಮಾತುಕತೆ ಮೂಲಕ ಬಗೆಹರಿಸಿಕೊಳ್ಳುತ್ತೇವೆ’ ಎಂದೂ ಶಿವಕುಮಾರ್ ತಿಳಿಸಿದರು.