ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಟಿಪ್ಪು ಜಯಂತಿಗೆ ನಾಲ್ವರು ಕಾಂಗ್ರೆಸ್‌ ಶಾಸಕರು ಗೈರು

Last Updated 10 ನವೆಂಬರ್ 2018, 12:14 IST
ಅಕ್ಷರ ಗಾತ್ರ

ಹೊಸಪೇಟೆ: ಬಳ್ಳಾರಿ ಜಿಲ್ಲೆಯ ಆಯಾ ವಿಧಾನಸಭಾ ಕ್ಷೇತ್ರಗಳಲ್ಲಿ ಶನಿವಾರ ಆಯೋಜಿಸಿದ್ದ ಟಿಪ್ಪು ಸುಲ್ತಾನ್‌ ಜಯಂತಿಯಲ್ಲಿ ಕಾಂಗ್ರೆಸ್‌ನ ನಾಲ್ವರು ಶಾಸಕರು ಗೈರು ಹಾಜರಾಗಿದ್ದರು.

ವಿಜಯನಗರ ಕ್ಷೇತ್ರದ ಶಾಸಕ ಆನಂದ್‌ ಸಿಂಗ್‌, ಬಳ್ಳಾರಿ ಗ್ರಾಮೀಣ ಶಾಸಕ ಬಿ. ನಾಗೇಂದ್ರ, ಹೂವಿನಹಡಗಲಿ ಶಾಸಕ ಪಿ.ಟಿ. ಪರಮೇಶ್ವರ ನಾಯ್ಕ, ಕಂಪ್ಲಿ ಶಾಸಕ ಜೆ.ಎನ್‌. ಗಣೇಶ್‌ ಜಯಂತಿಯಿಂದ ದೂರ ಉಳಿದಿದ್ದರು. ಸಂಡೂರು ಶಾಸಕ ಈ. ತುಕಾರಾಂ, ಹಗರಿಬೊಮ್ಮನಹಳ್ಳಿ ಕ್ಷೇತ್ರದ ಶಾಸಕ ಎಲ್‌.ಬಿ.ಪಿ. ಭೀಮಾ ನಾಯ್ಕ ಜಯಂತಿಯಲ್ಲಿ ಪಾಲ್ಗೊಂಡಿದ್ದರು.

ಹೋದ ವರ್ಷ ಬಿಜೆಪಿಯಲ್ಲಿದ್ದ ಶಾಸಕ ಆನಂದ್‌ ಸಿಂಗ್‌, ಅವರ ಪಕ್ಷದ ಮುಖಂಡರ ಸೂಚನೆಯನ್ನು ಮೀರಿ ಜಯಂತಿಯಲ್ಲಿ ಭಾಗವಹಿಸಿ ಅವರ ಕೆಂಗಣ್ಣಿಗೆ ಗುರಿಯಾಗಿದ್ದರು. ಜಯಂತಿಯನ್ನು ಬಿಜೆಪಿ ಬಹಿಷ್ಕರಿಸಿದ್ದರಿಂದ ಆ ಪಕ್ಷದ ಯಾವೊಬ್ಬ ಶಾಸಕರು ಸಮಾರಂಭದಲ್ಲಿ ಪಾಲ್ಗೊಳ್ಳಲಿಲ್ಲ.

ಜಯಂತಿ ಪ್ರಯುಕ್ತ ಮೆರವಣಿಗೆ, ರ್‍ಯಾಲಿ ಮೇಲೆ ಜಿಲ್ಲಾಡಳಿತ ನಿರ್ಬಂಧ ಹೇರಿತ್ತು. ಅದನ್ನು ಲೆಕ್ಕಿಸದೆ ಬಳ್ಳಾರಿ ನಗರದಲ್ಲಿ ಮುಸ್ಲಿಂ ಸಮಾಜದ ಯುವಕರು ಬೈಕ್‌ ರ್‍ಯಾಲಿ ನಡೆಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT