‘ಬಳ್ಳಾರಿ ಜಿಲ್ಲಾ ಮಿನರಲ್ ಫಂಡ್ ಬಳಕೆ ಕುರಿತು ವಿಧಾನಸೌಧದ ಕೊಠಡಿ ಸಂಖ್ಯೆ 106ರಲ್ಲಿ ಸಭೆ ನಿಗದಿಯಾಗಿದೆ. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಈ ಅನುದಾನ ಬಳಕೆ ಬಗ್ಗೆ ಚರ್ಚಿಸಿ ಅಂತಿಮಗೊಳಿಸಬೇಕಿದೆ. ಹೀಗಾಗಿ ಮೂವರು ಸಚಿವರು ಹಾಗೂ ಬಳ್ಳಾರಿ ಜಿಲ್ಲೆಯ ಶಾಸಕರು ಸಭೆಗೆ ತೆರಳುತ್ತಿದ್ದೇವೆ. ಸಭೆ ಬಳಿಕ ರೆಸಾರ್ಟ್ ಗೆ ವಾಪಸ್ ಆಗುತ್ತೇವೆ’ ಎಂದು ಡಿ.ಕೆ. ಶಿವಕುಮಾರ್ ತಿಳಿಸಿದರು.