ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲಂಚ: ಎನ್‌ಎಚ್‌ಎಐ ಅಧಿಕಾರಿಗಳ ವಿರುದ್ಧ ಸಿಬಿಐ ಪ್ರಕರಣ

Last Updated 10 ಫೆಬ್ರುವರಿ 2018, 19:02 IST
ಅಕ್ಷರ ಗಾತ್ರ

ನವದೆಹಲಿ: ಹೆದ್ದಾರಿ ನಿರ್ಮಾಣ ಕಾಮಗಾರಿ ಗುತ್ತಿಗೆ ಪಡೆಯಲು ಲಂಚ ನೀಡಿದ ಮತ್ತು ಸ್ವೀಕರಿಸಿದ ಆರೋಪದಲ್ಲಿ ಅಮೆರಿಕದ ಕಂಪನಿ ಮತ್ತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ(ಎನ್‌ಎಚ್‌ಎಐ) ಅಧಿಕಾರಿಗಳ ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿದೆ.

ಭಾರತದಲ್ಲಿ ಹೆದ್ದಾರಿ ನಿರ್ಮಾಣ ಕಾಮಗಾರಿ ಗುತ್ತಿಗೆ ಪಡೆಯಲು ಅಮೆರಿಕದ ಸಿಡಿಎಂ ಸ್ಮಿತ್‌ ಕಂಪನಿ 2011ರಿಂದ 2016ರ ಅವಧಿಯಲ್ಲಿ ಎನ್‌ಎಚ್‌ಎಐ ಅಧಿಕಾರಿಗಳಿಗೆ ಅಂದಾಜು ₹7.50 ಕೋಟಿ ಲಂಚ ನೀಡಿದೆ ಎಂದು ಸಿಬಿಐ ಅಧಿಕಾರಿಗಳು ತಿಳಿಸಿದ್ದಾರೆ.

ಈ ಅವಧಿಯಲ್ಲಿ ಸಿಡಿಎಂ ಸ್ಮಿತ್‌ ಇಂಡಿಯಾ ಹಣಕಾಸು ವಿಭಾಗದ ನಿರ್ದೇಶಕರಾಗಿದ್ದ ಗೋಪಕುಮಾರ್‌ ಮತ್ತು ಇತರ ಅಧಿಕಾರಿಗಳು, ಆರ್‌.ವಿ. ಇನ್ಫ್ರಾ ಸಲ್ಯೂಷನ್ಸ್‌ ಮ್ಯಾನೇಜರ್‌ ಆಗಿದ್ದ ಎಸ್‌. ಕೃಷ್ಣಮೂರ್ತಿ ಹಾಗೂ ಎನ್‌ಎಚ್‌ಎಐ ಅಧಿಕಾರಿಗಳ ವಿರುದ್ಧ ಸಿಬಿಐ ಎಫ್‌ಐಆರ್‌ ದಾಖಲಿಸಿದೆ.

ಸಿಡಿಎಂ ಸ್ಮಿತ್‌ ಇಂಡಿಯಾ ಕಂಪನಿ ಬೆಂಗಳೂರಿನಲ್ಲಿ ಕೇಂದ್ರ ಕಚೇರಿ ಹೊಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT