ಗುರುವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಮೂಲ್ ಅಧ್ಯಕ್ಷ ನರಸಿಂಹಮೂರ್ತಿ ಹಾಗೂ ಇತರ ನಿರ್ದೇಶಕರು, ‘ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲು ಇದೇ 2ರಂದು ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಸಲಾಗುವುದು. ಕೇಂದ್ರ ಸರ್ಕಾರ ರೈತರ ಮನವಿಗೆ ಸ್ಪಂದಿಸುವ ವಿಶ್ವಾಸ ವಿದೆ. ಅದನ್ನೂ ಮೀರಿ ರೈತರ ಹಿತ ಬಲಿಕೊಟ್ಟರೆ ಉಗ್ರ ಹೋರಾಟ ಅನಿವಾರ್ಯ’ ಎಂದು ಹೇಳಿದರು.