ಶಿರಸಿ: ಕನ್ನಡ ನಾಡಿನ ಪ್ರಥಮ ರಾಜಧಾನಿ, ತಾಲ್ಲೂಕಿನ ಬನವಾಸಿಯಲ್ಲಿ ಈ ಬಾರಿಯ ಕದಂಬೋತ್ಸವವು ಫೆ.9 ಮತ್ತು 10 ರಂದು ನಡೆಯಲಿದೆ ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಗುರುವಾರ ಇಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಪ್ರಕಟಿಸಿದರು.
ಇದೇ ವೇದಿಕೆಯಲ್ಲಿ ಪ್ರತಿಷ್ಠಿತ ಪಂಪ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಸರ್ಕಾರ ಇನ್ನಷ್ಟೇ ಈ ಪ್ರಶಸ್ತಿಗೆ ಆಯ್ಕೆಯಾದವರ ಹೆಸರನ್ನು ಪ್ರಕಟಿಸಬೇಕಾಗಿದೆ ಎಂದು ತಿಳಿಸಿದರು.