ಸೋಮವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಒಕ್ಕೂಟದ ಅಧ್ಯಕ್ಷ ಎಂ.ಎನ್.ವೇಣುಗೋಪಾಲ್, ‘ಮಾತೃ ಭಾಷೆಯಲ್ಲಿ ಕಲಿತವರಿಗೆ ಸ್ಥಳೀಯವಾಗಿ ಉದ್ಯೋಗಗಳು ಸಿಗುತ್ತಿಲ್ಲ. ಅನ್ಯ ಭಾಷಿಕರ ಎದುರು ಕನ್ನಡಿಗರು ನಿರುದ್ಯೋಗ ಸಮಸ್ಯೆ ಎದುರಿಸುತ್ತಿದ್ದಾರೆ.ಈ ವರದಿ ಜಾರಿ ಮಾಡುವುದರಿಂದ ಕನ್ನಡಿಗರಿಗೆ ಉದ್ಯೋಗ ಸಿಗಲಿದೆ’ ಎಂದರು.